ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯನ್ನು ರದ್ದುಗೊಳಿಸಲಾಗಿದೆ. ಈ ಮೂಲಕ 7 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ರೆಡ್ಡಿ ನಿಟ್ಟುಸಿರು ಬಿಟ್ಟಂತಾಗಿದೆ.
ಸಿಬಿಐ ಕೋರ್ಟ್ ತೀರ್ಪಿನ ವಿರುದ್ಧ ತೆಲಂಗಾಣ ಹೈಕೋರ್ಟ್ ಮೊರೆ ಹೋಗಿದ್ದ ರೆಡ್ಡಿಗೀಗ ದೊಡ್ಡ ರಿಲೀಫ್ ಸಿಕ್ಕಂತಾಗಿದೆ. ತೆಲಂಗಾಣ ಹೈಕೋರ್ಟ್ ಈ ಹಿಂದಿನ ಸಿಬಿಐ ನ್ಯಾಯಾಲಯದ ಶಿಕ್ಷೆಯನ್ನು ರದ್ದು ಮಾಡಿದೆ. ಇನ್ನು ಈ ಪ್ರಕರಣದಲ್ಲಿ ರೆಡ್ಡಿಗೆ ಷರತ್ತು ಬದ್ಧ ಜಾಮೀನನ್ನು ಕೋರ್ಟ್ ಮಂಜೂರು ಮಾಡಿದೆ. ಜನಾರ್ಧನ ರೆಡ್ಡಿ, 10 ಲಕ್ಷದ ಬಾಂಡ್ ಮತ್ತು ಇಬ್ಬರು ಶ್ಯೂರಿಟಿಗಳನ್ನು ಒದಗಿಸಬೇಕಿದೆ. ಅಷ್ಟೇ ಅಲ್ಲಾ ದೇಶ ಬಿಟ್ಟು ಹೋಗದಂತೆಯೂ ಕೋರ್ಟ್ ಕಟ್ಟಪ್ಪಣೆ ಮಾಡಿದ್ದು, ಪಾಸ್ ಪೋರ್ಟ್ ಜಪ್ತಿ ಮಾಡಲಾಗಿದೆ.