ಬೆಂಗಳೂರು: ಹಾಲಿನ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡಿದಿದೆ.
ಬೆಂಗಳೂರಿನ ನೆಲಮಂಗಲ ರಸ್ತೆಯಲ್ಲಿನ ಟಾಟಾ ಇನ್ಸ್ಟಿಟ್ಯೂಟ್ ಮುಂಭಾಗದಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನಲಾಗಿದೆ.
ಲಾರಿ ಚಾಲಕ ಕುಡಿದು ಲಾರಿ ಓಡಿಸುತ್ತಿದ್ದರಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಲಾರಿ ಬೆಂಗಳೂರು ಡೈರಿಯಿಂದ ನೆಲಮಂಗಲಕ್ಕೆ ಹೊರಟಿತ್ತು ಎನ್ನಲಾಗಿದೆ. ಸದಾಶಿವನಗರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ.