ತಮಿಳುನಾಡು: ತಮಿಳುನಾಡಿನಲ್ಲಿ ‘2026ರಲ್ಲಿ ನಡೆಯುವ ಚುನಾವಣೆಯಲ್ಲಿ ಬಿಜೆಪಿ ನತೃತ್ವದ ಮೈತ್ರಿಕೂಟ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಮಧುರೈನಲ್ಲಿ ಮಾತನಾಡಿದ ಅವರು, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯು ಅಧಿಕಾರಕ್ಕೆ ಬರುವುದು ನಿಶ್ಚಿತ. ‘ಕೇಂದ್ರ ಸರ್ಕಾರವು ತಮಿಳುನಾಡಿಗೆ ನೀಡುತ್ತಿರುವ ಅನುದಾನವನ್ನು ಡಿಎಂಕೆ ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆʼ ಎಂದು ಈ ವೇಳೆ ಅವರು ಆರೋಪಿಸಿದರು.
ಡಿಎಂಕೆ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಅಮಿತ್ ಶಾ ವಾಗ್ದಾಳಿ ನಡೆಸಿ, ‘ಈ ಸರ್ಕಾರವು ತನ್ನ ಚುನಾವಣಾ ಭರವಸೆಗಳಲ್ಲಿ ಶೇ.10ರಷ್ಟನ್ನೂ ಈಡೇರಿಸಿಲ್ಲ. 2026ರ ತಮಿಳುನಾಡು ಚುನಾವಣೆ ಬಿಜೆಪಿಗೆ ಮುಖ್ಯ ಯುದ್ಧಭೂಮಿಯಾಗಿದೆ ಎಂದಿದ್ದಾರೆ.