ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಬದಲಾವಣೆ ಆಗಬೇಕು. ಬದಲಾವಣೆ ಬಗ್ಗೆ ಚರ್ಚೆಗಳು ಬೇಡ. ಆದರೆ, ಬದಲಾವಣೆ ಆಗಬೇಕು. ವಿಜಯೇಂದ್ರನಿಂದಾಗಿ ರಾಜ್ಯದಲ್ಲಿ ಬಿಜೆಪಿ ನೆಲಕಚ್ಚಿದೆ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಬಾರಿ ಹೊಡೆತ ಬಿದ್ದಿದೆ. ವಿಜಯೇಂದ್ರ ಒಳ ಒಪ್ಪಂದಕ್ಕೆ ಬಿಜೆಪಿಗೆ ಹಿನ್ನಡೆಯಾಗಿದೆ. ಕೊಪ್ಪಳದಲ್ಲಿ ವಿಜಯೇಂದ್ರ ಚೇಲಾ ಡೀಲ್ ಮಾಡಿಕೊಂಡು ಬಿಜೆಪಿ ಸೋಲಿಸಿದರು. ಹಲವೆಡೆ ಇದೇ ರೀತಿ ಆಗಿದೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ಶಾಸಕರೇ ವಿಜಯೇಂದ್ರ ಡೀಲ್ ಬಗ್ಗೆ ಹೇಳಿದ್ದಾರೆ. ದೇವಸ್ಥಾನ ಹತ್ತಿ ಆಣೆ ಮಾಡುವುದಾಗಿ ಚನ್ನಗಿರಿ ಶಾಸಕ ಹೇಳಿದ್ದಾರೆ. ವಿಜಯೇಂದ್ರನನ್ನು ಮುಂದುವರೆಸಿದರೆ ಬಿಜೆಪಿಗೆ ಅದು ಆತ್ಮಾಹುತಿ ಇದ್ದಂತೆ. ಅದು ಎದೆಗೆ ಬಾಂಬ್ ಕಟ್ಟಿಕೊಂಡಂತೆ ಎಂದು ಹೇಳಿದ್ದಾರೆ.
ವಿಜಯೇಂದ್ರ ಹಿರಿಯರಿಗೆ ಗೌರವ ಕೊಡುವುದಿಲ್ಲ. ಯಡಿಯೂರಪ್ಪ ಸೈಕಲ್ ಮೇಲೆ ಓಡಾಡುವಾಗ ನಮಗೇನು ಹೆಲಿಕಾಪ್ಟರ್ ಇತ್ತಾ? ನಾವು ಸೈಕಲ್ ಮೇಲೆ ಓಡಿಡಿಯೇ ಪಕ್ಷ ಕಟ್ಟಿದ್ದೇವೆ. ಯಡಿಯೂರಪ್ಪ ಕುಟುಂಬದಿಂದ ಬಿಜೆಪಿ ಮುಕ್ತವಾಗಬೇಕು. ವಿಜಯೇಂದ್ರ ಹಿಂದೂ ಕಾರ್ಯಕರ್ತರಿಗೆ ಏನಾದರೂ ಆದಾಗ ಸಹಾಯಕ್ಕೆ ಹೋಗಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.
ವಿಜಯೇಂದ್ರ ಒಳ ಒಪ್ಪಂದಕ್ಕೆ ಬಿಜೆಪಿ ಕಾರ್ಯಕರ್ತರು ಸಾಯುತ್ತಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಸಲೀಂ, ಮುಶ್ರಿಪ್ ರಂತವರನ್ನು ತಂದರೆ ನಮ್ಮ ಮೇಲೆ ಕೇಸ್ ಆಗುತ್ತವೆ. ಇತ್ತೀಚೆಗಷ್ಟೇ ನನ್ನ ಮೇಲೆ ಕೇಸ್ ಆಗಿದೆ. ಸಲೀಂ ಪೊಲೀಸ್ ಇಲಾಖೆಯಲ್ಲಿ ಅಧಿಕಾರಿ ವಹಿಸಿಕೊಂಡ ಬಳಿಕ ಯತ್ನಾಳ್ ಮೇಲೆ ಎಷ್ಟು ಕೇಸ್ ಆಗಿವೆ ಎಂಬ ಮಾಹಿತಿಯನ್ನೂ ಅವರು ಪಡೆದಿದ್ದಾರೆ. ರಾಜ್ಯದಲ್ಲಿ ಸುಲಿಬೆಲೆ, ಪ್ರತಾಪ್ ಸಿಂಹ, ಮುತಾಲಿಕ್ ಟಾರ್ಗೆಟ್ ಆಗಿದ್ದಾರೆ. ಆಗಿದ್ದೇವೆ ಎಂದು ಬಾಂಬ್ ಸಿಡಿಸಿದ್ದಾರೆ.
ನಮ್ನ ಟೀಂ ದೊಡ್ಡದಿದೆ. ತಟಸ್ಥ ಟೀಂ ಸಹ ವಿಜಯೇಂದ್ರ ವಿರುದ್ಧ ಇದೆ. ಒಂದೇ ವಾರದಲ್ಲಿ ನಾವೆಲ್ಲ ಬೆಳಗಾವಿಯಲ್ಲಿ ಸಭೆ ನಡೆಸಲಿದ್ದೇವೆ ಎಂದಿದ್ದಾರೆ.
ಯಡಿಯೂರಪ್ಪ ತನ್ನ ಮಗನ ಭವಿಷ್ಯಕ್ಕಾಗಿ ನನ್ನ ಪಕ್ಷ ದಿಂದ ಉಚ್ಚಾರಣೆ ಮಾಡಿಸಿದ್ದಾರೆ. ಮಗನನ್ನ ಅಧ್ಯಕ್ಷ ಸ್ಥಾನದಿಂದ ಇಳಿಸಿ, ಯಡಿಯೂರಪ್ಪ ರಾಜಕೀಯ ನಿವೃತ್ತಿ ಪಡೆಯಬೇಕು. ವಿಜಯೇಂದ್ರ ಹಾಗೂ ಯಡಿಯೂರಪ್ಪ ಮೇಲೆ ಹಲವು ಕೇಸ್ ಇವೆ. ಇಡಿ ವಿಚಾರಣೆಗೂ ಹಾಜರಾಗಿದ್ದಾರೆ. ಇಂದಿಲ್ಲ ನಾಳೆ ಜೈಲಿಗೆ ಹೋಗುತ್ತಾರೆ ಎಂದಿದ್ದಾರೆ.