ಆನೇಕಲ್: ಅರೆಬೆಂದ ಸ್ಥಿತಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆಯಾಗಿರುವ ಘಟನೆ ನಡೆದಿದೆ.
ನಗರದ ಹೊರವಲಯದ ಬನ್ನೇರುಘಟ್ಟ ಪೊಲೀಸ್ ಠಾಣೆ(Bannerghatta Police Station) ವ್ಯಾಪ್ತಿಯ ಶಿಲೀಂದ್ರ ದೊಡ್ಡಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಜೆಪಿ ನಗರ(JP Nagara) ನಿವಾಸಿ ಮಧುಸೂದನ್(28) ಎಂದು ತಿಳಿದು ಬಂದಿದೆ. ಕ್ಯಾಬ್ ಡ್ರೈವರ್ ಆಗಿದ್ದ ಮಧುಸೂದನ್ ಬುಧವಾರ ರಾತ್ರಿ ಮನೆಯಿಂದ ಬೈಕ್ ನಲ್ಲಿ ಹೊರಗೆ ಹೋಗಿದ್ದಾರೆ.
ಆದರೆ ಗುರುವಾರ ಬೆಳಗ್ಗೆ ಬನ್ನೇರುಘಟ್ಟ ಅರಣ್ಯ ವ್ಯಾಪ್ತಿಯ ಶಿಲೀಂದ್ರ ದೊಡ್ಡಿ ಹತ್ತಿರದ ನಿರ್ಜನ ಪ್ರದೇಶದಲ್ಲಿ ಮಧುಸೂದನ್ ಮೃತದೇಹ ಅರೆಬರೆಯಾಗಿ ಸುಟ್ಟ ರೀತಿಯಲ್ಲಿ ಪತ್ತೆಯಾಗಿದೆ. ಘಟನಾ ಸ್ಥಳದಲ್ಲಿ ಬೈಕ್ ಪತ್ತೆಯಾಗಿದ್ದು, ಬೈಕ್ನ ನಂಬರ್ ಆಧಾರದ ಮೇಲೆ ಮಧುಸೂದನ್ ಗುರುತು ಪತ್ತೆಯಾಗಿದೆ. ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.