ಯಾದಗಿರಿ: ಭೀಮಾ ನದಿ ಪ್ರವಾಹಕ್ಕೆ ಇಬ್ಬರು ಯುವಕರು ಕೊಚ್ಚಿ ಹೋಗಿ ಮೂರು ದಿನಗಳೇ ಕಳೆದಿವೆ. ಇದುವರೆಗೂ ಮೃತದೇಹ ಪತ್ತೆ ಕಾರ್ಯಾಚರಣೆ ನಡೆಯುತ್ತಿದ್ದು, ಸದ್ಯ ಯುವಕನೋರ್ವನ ಮೃತದೇಹ ಪತ್ತೆಯಾಗಿದೆ.
ಭೀಮಾನ ನದಿಯ ಪ್ರವಾಹಕ್ಕೆ ಇಬ್ಬರು ಯುವಕರು ಬಲಿಯಾಗಿದ್ದರು. ಈ ಹಿನ್ನೆಲೆಯಲ್ಲಿ SDRF ತಂಡ ಕಾರ್ಯಾಚರಣೆ ನಡೆಸುತ್ತಿದೆ. ಈ ವೇಳೆ ಓರ್ವ ಯುವಕನ ಶವ ಪತ್ತೆಯಾಗಿದೆ. ಯುವಕರು ನೀರುಪಾಲಾದ 200 ಮಿಟರ ದೂರದ ದಡದಲ್ಲಿ ಶವ ಪತ್ತೆಯಾಗಿದೆ. ಮತ್ತೋರ್ವ ಯುವಕನ ಶವಕ್ಕಾಗಿ ಕಾರ್ಯಾಚರಣೆ ನಡೆಯುತ್ತಿದೆ.