ರಾಜ್ಯದಲ್ಲಿ ಈಗ ಮಂಗನ ಕಾಯಿಲೆಯ ಹಾವಳಿ ಶುರುವಾಗಿದೆ.
ಈ ಕಾಯಿಲೆಗೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಮಂಗನ ಕಾಯಿಲೆಗೆ (KFD) 8 ವರ್ಷದ ಬಾಲಕ ಸಾವನ್ನಪ್ಪಿರುವಂತಹ (death) ಘಟನೆ ನಡೆದಿದೆ. ದತ್ತರಾಜಪುರ ಗ್ರಾಮದ ರಾಮು ಹಾಗೂ ಮಮತಾ ಎಂಬುವರ ಮಗ ರಚಿತ್ ಮೃತ ಬಾಲಕ. ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಬಾಲಕ ಸಾವನ್ನಪ್ಪಿದ್ದಾನೆ. ಆ ಮೂಲಕ ತೀರ್ಥಹಳ್ಳಿ ತಾಲೂಕಿನಲ್ಲಿ ಈ ವರ್ಷ ಮಂಗನ ಕಾಯಿಲೆಗೆ ಇಬ್ಬರು ಸಾವನ್ನಪ್ಪಿದ್ದಾರೆ. ಬಾಲಕ ಸಾವಿನ ಕುರಿತು ಒಂದು ವಾರದಲ್ಲಿ ಡೆತ್ ಅಡಿಟ್ ವರದಿ ನೀಡಲು ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ ಆರೋಗ್ಯ ಇಲಾಖೆಗೆ ಸೂಚನೆ ನೀಡಿದ್ದಾರೆ.
ಬೇಸಿಗೆ ತಿಂಗಳಲ್ಲಿ ಮಂಗನ ಕಾಯಿಲೆ ಉಲ್ಬಣಗೊಳ್ಳುತ್ತಿದ್ದು, ಮಂಗನ ಕಾಯಿಲೆ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಪರದಾಡುತ್ತಿದ್ದಾರೆ. ಹೀಗಾಗಿ ಕಾಡಿನಂಚಿನಲ್ಲಿ ನೆಲಸಿರುವ ಗ್ರಾಮಸ್ಥರು ಆತಂಕದಲ್ಲಿದ್ದಾರೆ.