ತುಮಕೂರು: ಸಾರಿಗೆ ಬಸ್ ನ ಟೈಯರ್ ಬ್ಲಾಸ್ಟ್ ಆದ ಪರಿಣಾಮ ಮನೆಗೆ ನುಗ್ಗಿರುವ ಘಟನೆಯೊಂದು ನಡೆದಿದೆ.
ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪುಟ್ಟಣ್ಣ ಎಂಬುವವರ ಮನೆಗೆ ಕೆಎಸ್ ಆರ್ ಟಿಸಿ ಬಸ್ ಗುದ್ದಿದೆ. ಬಸ್ ಗುದ್ದಿದ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇಲ್ಲದ ಹಿನ್ನೆಲೆಯಲ್ಲಿ ಅನಾಹುತ ತಪ್ಪಿದಂತಾಗಿದೆ. ಆದರೆ, ಬಸ್ ನಲ್ಲಿದ್ದ 10 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಬಸ್ ಆಗುಂಬೆಯಿಂದ ಕೋಲಾರಕ್ಕೆ ತೆರಳುತ್ತಿತ್ತು ಎನ್ನಲಾಗಿದೆ.