ಬೆಂಗಳೂರು: ಜನಿವಾರ ತೆಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ.
ಮುಖ್ಯ ನ್ಯಾ. ಅಂಜಾರಿಯಾ ಮತ್ತು ನ್ಯಾ. ಕೆ ವಿ ಅರವಿಂದ್ ವಿಭಾಗೀಯ ಪೀಠದಿಂದ ನೋಟಿಸ್ ನೀಡಲಾಗಿದೆ. ರಾಜ್ಯ ಸರ್ಕಾರ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನೋಟಿಸ್ ನೀಡಲಾಗಿದೆ. ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ರಘುನಾಥ್, ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಅರ್ಜಿ ಪರಿಶೀಲಿಸಿದ ಕೋರ್ಟ್, ಪ್ರತಿವಾದಿಗಳು ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶಿಸಿದೆ. ಅಲ್ಲದೇ, ಪ್ರಕರಣದ ವಿಚಾರಣೆಯನ್ನು ಜೂ. 9ಕ್ಕೆ ಮುಂದೂಡಲಾಗಿದೆ.