ಧಾರವಾಡ : ವಿದ್ಯಾರ್ಥಿ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯವನ್ನು ನಾವು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಆ ಬಗ್ಗೆ ದೂರು ಕೊಟ್ಟು ತನಿಖೆ ಮಾಡಿಸುತ್ತೇವೆ. ಜನಿವಾರ ಕಟ್ ಮಾಡಿದವರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಾ. ಜಿಲ್ಲಾಡಳಿತ ಹಾಗೂ ಪೊಲೀಸ್ ಆಯುಕ್ತರ ಜೊತೆ ಆ ಬಗ್ಗೆ ಚರ್ಚೆ ಮಾಡಿದ್ದೇವೆ. ಈ ಶತಮಾನದಲ್ಲಿ ಕೂಡಾ ನಾವು ಗಂಭೀರ ಆಗಿಲ್ಲ ಎಂದು ಹೇಳಿದ್ದಾರೆ.
ಹಿಜಾಬ್ ಬಗ್ಗೆ ಸಿಎಂ ಅರ್ಧ ಗಂಟೆ ಮಾತನಾಡಿದ್ದರು ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಈ ಮಾತನ್ನು ಸಿಎಂ ಅವರಿಗೆ ಬೆಲ್ಲ ಅವರೇ ಹೋಗಿ ಕೇಳಲಿ. ಸಿಎಂ ಇದಕ್ಕೆ ಉತ್ತರ ಕೊಡುತ್ತಾರೆ ಎಂದು ಹೇಳಿದ್ದಾರೆ.