ನಟ ವಿಜಯ್ ದೇವರಕೊಂಡ (Vijay Deverakonda) ವಿರುದ್ಧ ಜಾತಿ ನಿಂದನೆ ದೂರು ದಾಖಲಾಗಿದೆ.
ಬುಡಕಟ್ಟು ಜನರ ಬಗ್ಗೆ ವಿಜಯ್ ದೇವರಕೊಂಡ ನೀಡಿದ ಹೇಳಿಕೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ (ದೌರ್ಜನ್ಯ ತಡೆ) ಕಾಯ್ದೆ (SC/ST Act) ಅಡಿಯಲ್ಲಿ ವಿಜಯ್ ದೇವರಕೊಂಡ ವಿರುದ್ಧ ದೂರು ದಾಖಲಾಗಿದೆ.
ಜೂ. 17ರಂದು ‘ರೆಟ್ರೋ’ ಸಿನಿಮಾದ ಪ್ರಚಾರದ ಸಂದರ್ಭದಲ್ಲಿ ವಿಜಯ್ ದೇವರಕೊಂಡ ಪಾಕಿಸ್ತಾನದ ವರ್ತನೆಯನ್ನು ಬುಡಕಟ್ಟು ಸಂಘರ್ಷಕ್ಕೆ ಹೋಲಿಕೆ ಮಾಡಿದ್ದರು. ‘500 ವರ್ಷಗಳ ಹಿಂದೆ ಬುಡಕಟ್ಟು ಜನರು ಯುದ್ಧ ಮಾಡಿದ ರೀತಿಯಲ್ಲಿ ಪಾಕಿಸ್ತಾನಿಗಳು ವರ್ತಿಸುತ್ತಿದ್ದಾರೆ’ ಎಂದು ಆರೋಪಿಸಿದ್ದರು. ಆದರೆ, ಈ ಹೇಳಿಕೆ ಬುಡಕಟ್ಟು ಜನಾಂಗದ ಭಾವನೆಗೆ ಧಕ್ಕೆ ಆಗಿದೆ ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ದೂರು ದಾಖಲಾಗಿದೆ. ಆನಂತರ ಈ ವಿಷಯವಾಗಿ ದೇವರಕೊಂಡು ಕ್ಷಮೆ ಕೂಡ ಕೇಳಿದ್ದರು.