ಬೆಂಗಳೂರು: ಇಂದು ರಾಜ್ಯ ಒಕ್ಕಲಿಗ ಜನಾಂಗದಿಂದ ಹೈವೋಲ್ಟೆಜ್ ಮೀಟಿಂಗ್ ನಡೆಯಲಿದೆ.
ಇಂದು ಮಧ್ಯಾಹ್ನ 12ಕ್ಕೆ ಒಕ್ಕಲಿಗರ ಸಂಘದ ಕಚೇರಿಯಲ್ಲಿ ಸಭೆ ಕರೆಯಲಾಗಿದೆ. ಸಭೆಯಲ್ಲಿ ಸಾಧಕ ಬಾಧಕಗಳ ಕುರಿತು ಚರ್ಚೆ ನಡೆಸಲಾಗುತ್ತದೆ. ಅಲ್ಲದೇ, ಜಾತಿ ಗಣತಿಯಲ್ಲಿ ಒಕ್ಕಲಿಗರಿಗೆ ಅನ್ಯಾಯವಾಗಿದೆ ಎಂದು ಹೋರಾಟ ಮಾಡಲು ಕೂಡ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಸಭೆಯಲ್ಲಿ ಸಂಘದ ನಿರ್ದೇಶಕರು, ಪದಾಧಿಕಾರಿಗಳು ಹಾಜರಿರಲು ಸೂಚನೆ ನೀಡಲಾಗಿದೆ. ಜಾತಿ ಜನಗಣತಿಯಲ್ಲಿ ಒಕ್ಕಲಿಗ ಜನಾಂಗಕ್ಕೆ ಅನ್ಯಾಯವಾಗಿದ್ದರೆ ಸರ್ಕಾರದ ವಿರುದ್ಧ ಹೋರಾಡಲು ರೂಪುರೇಷ ಸಿದ್ಧಪಡಿಸಲು ತೀರ್ಮಾನಿಸಲಾಗುತ್ತದೆ. ಮೀಸಲಾತಿಯಲ್ಲಿ ಒಕ್ಕಲಿಗ ಸಮುದಾಯಕ್ಕೆ ಸರಿಯಾದ ಪ್ರತಿನಿತ್ಯ ಕೊಡಬೇಕು ಎಂದು ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ಮಾಡಲು ರೂಪರೇಷ ಸಿದ್ದತೆ ಮಾಡಿಕೊಳ್ಳಲು ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.