ಮಂಡ್ಯ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಸಚಿವ ಚಲುವರಾಯಸ್ವಾಮಿ(Minister Chaluvarayaswamy) ಗಂಭೀರ ಆರೋಪ ಮಾಡಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಕುಮಾರಸ್ವಾಮಿ (HD Kumaraswamy) ಮಗನ ಚುನಾವಣೆಗಾಗಿ ಕಂಪನಿಗಳಿಂದ ಸಾವಿರಾರು ಕೋಟಿ ರೂ. ರೋಲ್ ಕಾಲ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ..
ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಉಪಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಹಣದ ಹೊಳೆ ಹರಿಸಿವೆ. ಹೀಗಾಗಿ ನಮಗೆ ಅವರ ಜೊತೆ ಓಡೋಕೆ ಆಗಲಿಲ್ಲ. ಹೀಗಾಗಿ ನಾವು ಐದು ಗ್ಯಾರಂಟಿ ಕೊಟ್ಟಿದ್ದೇವೆ ದಯವಿಟ್ಟು ಸಹಾಯ ಮಾಡಿ ಎಂದು ಜನರನ್ನು ಕೇಳಿದ್ದೇವೆ ಎಂದಿದ್ದಾರೆ.
ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಬಿ.ಎಸ್. ಯಡಿಯೂರಪ್ಪ ಅವರನ್ನು ಸಿಎಂ ಮಾಡಲು ಜೆಡಿಎಸ್ ಸದಸ್ಯರನ್ನು ಆಪರೇಷನ್ ಮಾಡಲಾಗಿತ್ತು. ಈಗ ಈ ಬಹುಮತದ ಸರ್ಕಾರ ರಚನೆಯಾದಾಗಿನಿಂದಲೂ ಬಿಜೆಪಿ-ಜೆಡಿಎಸ್ ನವರು ಈ ಸರ್ಕಾರ ಉಳಿಯಲ್ಲ ಅಂತಿದ್ದಾರೆ. ಆಪರೇಶನ್ ಕಮಲದ ಉದ್ದೇಶದಿಂದಲೇ ಅವರು ಈ ರೀತಿ ಮಾತನಾಡುತ್ತಿದ್ದಾರೆ ಎಂದಿದ್ದಾರೆ.