ದಾವಣಗೆರೆ: ಜಾತಿ ಗಣತಿ ವಿಚಾರವಾಗಿ ಕೇಂದ್ರ ಸರ್ಕಾರ ಬಹಳ ಹಿಂದೆ ಇದೆ ಎಂದು ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಾತಿ ಗಣತಿ ವರದಿಯನ್ನು ಸಚಿವ ಸಂಪುಟದ ಮುಂದೆ ಇಟ್ಟಾಗ ಯಾರೂ ಕೂಡ ವಿರೋಧ ಮಾಡಲಿಲ್ಲ. ವರದಿಗೆ ವಿರುದ್ದವಾದ ಅಭಿಪ್ರಾಯಯನ್ನು ಯಾರು ಕೂಡ ವ್ಯಕ್ತಪಡಿಸಿರಲಿಲ್ಲ. ಯಾರಿಗೂ ಅನ್ಯಾಯವಾಗದಂತೆ ನೋಡಬೇಕು ಎಂದು ಹೇಳಿದ್ದಾರೆ ಎಂದಿದ್ದಾರೆ.
ಕೇಂದ್ರ ಸರ್ಕಾರ ಈಗ ನಿರ್ಧಾರ ಮಾಡಿದ್ದನ್ನು ಸಿದ್ದರಾಮಯ್ಯನವರ ನೇತೃತ್ವದಲ್ಲಿ ಈಗಾಗಲೇ ಮಾಡಿ ಮುಗಿಸಿದ್ದಾರೆ. ಕೇಂದ್ರದ ಸರ್ಕಾರ ಏನು ನಿರ್ಣಯ ಮಾಡಿದೆಯೋ? ಅದಕ್ಕೆ ಸ್ವಾಗತ ಮಾಡುತ್ತೇವೆ ಎಂದು ಸಹಕಾರಿ ಸಚಿವ ಕೆಎನ್ ರಾಜಣ್ಣ ಹೇಳಿಕೆ ನೀಡಿದ್ದಾರೆ.
ಬಿಜೆಪಿ ಹೇಳಿಕೆಗೆ ರಾಜಣ್ಣ ರಿಯಾಕ್ಷನ್
ರಾಜ್ಯದಲ್ಲಿ ಜಾತಿಗಣತಿಯನ್ನು ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಓಟ್ ಬ್ಯಾಂಕ್ ಗಾಗಿ ಮಾಡುತ್ತಿದ್ದಾರೆಂಬ ಬಿಜೆಪಿ ಹೇಳಿಕೆಗೆ ರಾಜಣ್ಣ ರಿಯಾಕ್ಷನ್ ಕೊಟ್ಟಿದ್ದಾರೆ. ಕೇಂದ್ರದವರು ಈಗ ಜಾತಿಗಣತಿ ಮಾಡಲು ಹೊರಟಿದ್ದಾರಲ್ಲ ಯಾವ ಸ್ವಾರ್ಥಕ್ಕಾಗಿ ಮಾಡಿದ್ದಾರೆ ಎಂದು ಪ್ರಶ್ನೆ ಮಾಡಿದ್ದಾರೆ.
ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಕೂಡ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಮುಂದೆ ಬರಲು ಜಾತಿಗಣತಿ ಮಾಡಿದ್ದು, ಆದರೆ ಸ್ವಾರ್ಥಕ್ಕಾಗಿ ಓಟ್ ಬ್ಯಾಂಕ್ ಗಾಗಿ ಜಾತಿಗಣತಿ ಮಾಡಿದ್ದಾರೆ ಎಂದರೆ ನಾನು ಒಪ್ಪುವುದಿಲ್ಲ. ವರದಿ ಕಳೆದು ಹೋಗಿದೆ ಎಂದರೆ ಬಿಜೆಪಿಯವರು ಹೋಗಿ ಹುಡುಕಿಕೊಂಡು ಬರುವುದಕ್ಕೆ ಹೇಳಿ. ಅದನ್ನು ಬಿಟ್ಟು ಕಳೆದು ಹೋಗಿದೆ ಎಂದು ಸುಳ್ಳು ಹೇಳಿ ತಪ್ಪು ಸಂದೇಶ ನೀಡಿ ಗೊಂದಲಕ್ಕೆ ಒಳಪಡಿಸುವ ಕೆಲಸ ಮಾಡುತ್ತಿರುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಿಎಂ ಸ್ಥಿರತೆ ಬಗ್ಗೆ ಮಾತನಾಡಿದವರಿಗೆ ರಾಜಣ್ಣ ತಿರುಗೇಟು
ಸಿಎಂ ಸಿದ್ದರಾಮಯ್ಯ ಸ್ಥೀಮಿತ ಬಗ್ಗೆ ಮಾತನಾಡಿದವರಿಗೆ ಕೆ.ಎನ್. ರಾಜಣ್ಣ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯನವರು ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದವರ ಸ್ಥಿಮಿತತೆ ಸರಿ ಇಲ್ಲ. ಕಾಂಗ್ರೆಸ್ ಶಾಲು ಹಾಕಿಕೊಂಡು ನಮ್ಮ ಕಾರ್ಯಕ್ರಮದಲ್ಲಿ ಕೂತುಕೊಂಡು ಧಿಕ್ಕಾರ ಕೂಗಿದರೆ ಅವರನ್ನು ಹೇಡಿಗಳು ಎನ್ನಬೇಕು. ಪೊಲೀಸ್ ಅಧಿಕಾರಿ ಮೇಲೆ ಸಿದ್ದರಾಮಯ್ಯ ಕೈ ಎತ್ತಿಲ್ಲ. ಏಕವಚನದಲ್ಲಿ ಅವರು ಯಾರನ್ನು ಕರೆದಿಲ್ಲ. ಸಿದ್ದರಾಮಯ್ಯ ಪ್ರೀತಿಯಿಂದ ಕರೆದಿದ್ದಾರೆ. ಕೈ ಎತ್ತಿದ್ದಾರೆ, ಏಕವಚನದಲ್ಲಿ ಕರೆದಿದ್ದಾರೆ ಎನ್ನುವುದು ಮಾಧ್ಯಮಗಳ ಸೃಷ್ಟಿ ಅಷ್ಟೇ. ಅವರ ಮಾತಿನ ಸ್ವಭಾವವೇ ಹಾಗೆ. ಸಿದ್ದರಾಮಯ್ಯನವರದ್ದು ಶ್ರೀಮಂತ ಹೃದಯ,
ಬಡವರಿಗೆ ಸ್ಪಂದಿಸುವ ಹೃದಯ. ವಿರೋಧ ಪಕ್ಷಗಳಿಗೆ ಮಾಡಲು ಕೆಲಸ ಇಲ್ಲ ಚುನಾವಣೆಯಲ್ಲಿ ಸೋತಿದ್ದರಿಂದ ಈ ರೀತಿ ಮಾಡುತ್ತಿದ್ದಾರೆ. ಜನರ ಭಾವನೆಗಳನ್ನು ಕೆರಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಸಿದ್ದು ಪರ ಬ್ಯಾಟ್ ಬೀಸಿದ್ದಾರೆ.
ಮೋದಿ ಬಗ್ಗೆ ರಿಯಾಕ್ಟ್
ಪ್ರಧಾನಿಗಳು ಕಾಣೆಯಾಗಿದ್ದಾರೆ ಎಂದು ಪೋಸ್ಟ್ ಮಾಡಿದ್ದಾರೆ. ಪ್ರಧಾನಿಗಳು ಇಲ್ಲೇ ಇದ್ದಾರಲ್ಲ ಅವರು ಎಲ್ಲಿಗೆ ಹೋಗಿದ್ದಾರೆ. ವಾಕ್ ಸ್ವಾತಂತ್ರ್ಯ ಇರುವುದರಿಂದ ಅವರ ಭಾವನೆ ವ್ಯಕ್ತಪಡಿಸಿದ್ದಾರೆ ಅಷ್ಟೇ ಎಂದಿದ್ದಾರೆ.