ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಅವರ ಕೈ ಬೆರಳಿಗೆ ಗಾಯವಾಗಿರುವ ಘಟನೆ ನಡೆದಿದೆ.
ವಿಧಾನಸೌಧದ (Vidhansoudha) ಸಮಿತಿ ಕೊಠಡಿ 313 ರಿಂದ ಜನಸ್ಪಂದನೆ ಕಾರ್ಯಕ್ರಮಕ್ಕೆ ಸಿಎಂ ಬರುತ್ತಿದ್ದ ಸಂದರ್ಭದಲ್ಲಿ ಗುಂಡು ಸೂಜಿ ಚುಚ್ಚಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈಗೆ ಗಾಯವಾಗಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಬೆರಳಿಗೆ ಕರ್ಚೀಫ್ ಸುತ್ತಿಕೊಂಡು ಸಭೆಗೆ ತೆರಳಿದರು.
ಹೀಗಾಗಿ ಸ್ಥಳಕ್ಕೆ ಆಗಮಿಸಿದ ತಪಾಸಣೆ ನಡೆಸಿ, ಪ್ರಥಮ ಚಿಕಿತ್ಸೆ ನಡೆಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕುಸಿದು ಕೂತ ಘಟನೆ ನಡೆದಿತ್ತು. ವಿಜಯನಗರ ಜಿಲ್ಲೆಯ ಕೂಡ್ಲಿಗಿ ಬಳಿ ಪ್ರಚಾರಕ್ಕೆ ತೆರಳಿದ್ದ ಸಿದ್ದರಾಮಯ್ಯ ಅವರು ಬಳಲಿಕೆಯಿಂದ ಕುಸಿದು ಕೂತಿದ್ದರು. ಕೂಡಲೇ ಅವರನ್ನು ಕಾರಿನಲ್ಲಿ ಕೂರಿಸಿ, ತಂಪು ಪಾನೀಯ ನೀಡಿ ಆರೈಕೆ ಮಾಡಲಾಗಿತ್ತು. ಈಗ ಬೆರಳಿಗೆ ಗಾಯ ಮಾಡಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಈಗ ವಿಪಕ್ಷಗಳ ಹಲವಾರು ಆರೋಪಳಿಗೆ ತುತ್ತಾಗಿದ್ದಾರೆ.