ಧಾರವಾಡ: ಎಎಸ್ಪಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಮಾಡಲು ಹೋದ ಪ್ರಸಂಗವೊಂದು ನಡೆದಿದೆ.
ಬೆಳಗಾವಿಯಲ್ಲಿ ಕೇಂದ್ರದ ಬೆಲೆ ಏರಿಕೆ ಖಂಡಿಸಿ ಹೋರಾಟ ನಡೆಸಲಾಗುತ್ತಿತ್ತು. ಈ ವೇಳೆ, ಭಾಷಣಕ್ಕೆ ನಿಂತಿದ್ದ ಸಿಎಂ, ಏಕಾಏಕಿ ಧಾರವಾಡದ ಎಎಸ್ಪಿ ನಾರಾಯಣ ಭರಮನಿ ಮೇಲೆ ಕೈ ಮಾಡಲು ಮುಂದಾಗಿದ್ದಾರೆ.
ಅಷ್ಟಕ್ಕೂ ಕಾಂಗ್ರೆಸ್ ಸಮಾವೇಶದ ವೇಳೆ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು ಘೋಷಣೆ ಕೂಗಿ ಹೈಡ್ರಾಮಾ ಮಾಡಿದ್ದರು. ಇದರಿಂದ ಭಾಷಣದ ವೇಳೆಯೇ ಕೆರಳಿದ ಸಿದ್ದರಾಮಯ್ಯ, ಎಎಸ್ಪಿ ಮೇಲೆ ದಾಳಿಗೆ ಮುಂದಾಗಿದ್ದಾರೆ. ಕೂಡಲೇ ಮಧ್ಯ ಪ್ರವೇಶಿಸಿದ ಸಚಿವ ಎಂಬಿ ಪಾಟೀಲ್ ಪರಿಸ್ಥಿತಿಯನ್ನು ನಿಭಾಯಿಸಿದ್ದಾರೆ.