ಕನ್ನಡದ ಮಾಣಿಕ್ಯ ಸಿನಿಮಾ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ನಟಿ ರನ್ಯಾ ರಾವ್ ಇದೀಗ ಪರಪ್ಪನ ಅಗ್ರಹಾರದಲ್ಲಿದ್ದಾರೆ. ಈಗಾಗಲೇ ಆರ್ ಟಿ ಐ ಅಧಿಕಾರಿಗಳು ರನ್ಯಾ ರಾವ್ ವಿಚಾರಣೆಯನ್ನು ನಡೆಸಿ ಕೋರ್ಟ್ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಇದಾದ ಬಳಿಕ ರನ್ಯಾ ರಾವ್ ಜಾಮೀನು ಅರ್ಜಿ ಸಲ್ಲಿಸಿದರೂ ಕೋರ್ಟ್ ನಿಂದ ಸಿಕ್ಕಿಲ್ಲ.
ಕೇಂದ್ರೀಯ ಆರ್ಥಿಕ ಗುಪ್ತಚರ ಬ್ಯೂರೋ ರನ್ಯಾ ವಿರುದ್ಧ ಕಾಫಿಪೊಸಾ ಹೊರಡಿಸಿದ್ದು, ಅವರನ್ನು ಪರಪ್ಪನ ಅಗ್ರಹಾರ ಕೇಂದ್ರೀಯ ಕಾರಾಗ್ರಹದಲ್ಲಿಯೇ ಬಂಧನದಲ್ಲಿ ಇಡುವಂತೆ ಆದೇಶಿಸಿದೆ. ಹಾಗಾದರೆ ಕಾಫಿಪೋಸಾ ಎಂದರೆ ವಿದೇಶಿ ವಿನಿಮಯ ನಿಯಂತ್ರಣ ಹಾಗೂ ಕಳ್ಳ ಸಾಗಾಣಿಕೆ ತಡೆ ಕಾಯ್ದೆಯಾಗಿದೆ. ಈ ಕಾಫಿಪೋಸಾ ಕಾಯ್ದೆಯನ್ನು ಕಳ್ಳಸಾಗಣೆ ಮಾಡುವವರ ವಿರುದ್ಧ ಹಾಕಲಾಗುತ್ತದೆ.
ಆರೋಪಿಯು ಜಾಮೀನು ಪಡೆಯಬಾರದು ಎಂಬುದು ಇದರ ಮೂಲ ಉದ್ದೇಶವಾಗಿದೆ. ನಟಿ ರನ್ಯಾ ರಾವ್, ಮಾರ್ಚ್ ನಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 14.2 ಕೆಜಿ ಚಿನ್ನದ ಸಮೇತ ಸಿಕ್ಕಿಬಿದ್ದಿದ್ದರು.ಆರ್ ಟಿ ಐ ಇಲಾಖೆಯು ಇವರನ್ನು ಬಂಧಿಸಿತ್ತು. ಪ್ರಕರಣದ ತನಿಖೆ ನಡೆದಂತೆ ರನ್ಯಾ ರಾವ್ ಸುಮಾರು 49.6 ಕೆಜಿ ಅಕ್ರಮ ಚಿನ್ನ ಸಾಗಾಣೆ ಮಾಡಿರುವುದು ಪತ್ತೆಯಾಗಿತ್ತು. ಈ ಪ್ರಕರಣದಲ್ಲಿ ಪೊಲೀಸ್ ಇಲಾಖೆಯ ಕೆಲವರು ಸಹ ಪಾಲುದಾರರಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿತ್ತು. ನಟಿ ರನ್ಯಾ ರಾವ್, ಪೊಲೀಸ್ ಇಲಾಖೆಯ ಕೆಲ ಅಧಿಕಾರಗಳನ್ನು ಬಳಸಿಕೊಂಡು ಚಿನ್ನ ಕಳ್ಳಸಾಗಣೆ ಮಾಡಿದ್ದರು.
ನಟಿ ರನ್ಯಾ ರಾವ್ ಪ್ರಸ್ತುತ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಅವರ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ನಲ್ಲಿ ನಡೆಯುತ್ತಿದ್ದ ಜಾಮೀನು ಆದೇಶವನ್ನು ಕಾಯ್ದಿರಿಸಲಾಗಿದೆ. ಇದರ ನಡುವೆ ಇದೀಗ ಅವರ ಮೇಲೆ ಕಾಫಿಪೋಸಾ ಕಾಯ್ದೆ ಹೇರಲಾಗಿದೆ. ಇದರಿಂದಾಗಿ ನಟಿ ಇನ್ನೂ ಹಲವು ತಿಂಗಳು ಜೈಲಿನಲ್ಲಿಯೇ ಕಳೆಯಬೇಕಾದ ಸಾಧ್ಯತೆ ಬರಬಹುದಾಗಿದೆ.