ಮಂಗಳೂರಿನ ನಟ ಕಾಮಿಡಿ ಕಿಲಾಡಿಗಳು ಸೀಸನ್ ಮೂರರ ವಿನ್ನರ್ ರಾಕೇಶ್ ಪೂಜಾರಿ ಲೋ ಬಿಪಿಯಿಂದಾಗಿ ವಿಧಿವಶರಾಗಿದ್ದಾರೆ.
ನಿನ್ನೆ ತನ್ನ ಊರಿನಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಭಾಗಿಯಾದ ಇವರಿಗೆ ಅನಾರೋಗ್ಯ ಉಂಟಾಗಿದ್ದು, ತಕ್ಷಣವೇ ರಾಕೇಶ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ರಾಕೇಶ್ ಪೂಜಾರಿ ಅವರು ಮೂಲತಃ ಉಡುಪಿಯವರಾಗಿದ್ದು, ಸಾಕಷ್ಟು ತುಳು ರಿಯಾಲಿಟಿ ಶೋ ಗಳನ್ನು ಕೂಡ ಮಾಡಿದ್ದರು. ಕಡ್ಲೆ ಬಜನ್ ಎನ್ನುವಂತಹ ರಿಯಾಲಿಟಿ ಶೋ ಮೂಲಕ ತುಳುನಾಡಿನಲ್ಲಿ ರಾಕೇಶ್ ಪೂಜಾರಿ ಜನಪ್ರಿಯತೆ ಗಳಿಸಿದ್ದರು. ನಟನೆ ಎನ್ನುವುದು ಇವರಿಗೆ ದಾರಿ ದೀಪವಾಗಿತ್ತು. ನಂತರ ಬೆಂಗಳೂರಿಗೆ ಪ್ರಯಾಣ ಬೆಳೆಸಿದ ಇವರು ಕನ್ನಡದ ರಿಯಾಲಿಟಿ ಶೋಗಳಲ್ಲಿ ಭಾಗಿಯಾಗಿ ಹಾಸ್ಯದಿಂದಲೇ ಎಲ್ಲರನ್ನು ನಿಬ್ಬೆರಗುಗೊಳಿಸುತ್ತಿದ್ದರು. ಸುದ್ದಿ ಕೇಳಿ ಅಭಿಮಾನಿಗಳು ಬೆಚ್ಚಿ ಬಿದ್ದಿದ್ದಾರೆ.
ಕಾಮಿಡಿ ಕಿಲಾಡಿಗಳು ಜಡ್ಜ್ ಆಗಿದ್ದ ನಟಿ ರಕ್ಷಿತಾ ಕೂಡ ಶಾಕ್ ಆಗಿದ್ದಾರೆ. ಮಿಸ್ ಯು ಮಗನೇ, ನಾನು ಇನ್ಯಾವತ್ತೂ ನಿನ್ನ ಜೊತೆ ಮಾತನಾಡಲು ಆಗುವುದಿಲ್ಲ. ಕಾಮಿಡಿ ಕಿಲಾಡಿ ನನ್ನ ಹೃದಯಕ್ಕೆ ಹತ್ತಿರವಾದ ಕಾರ್ಯಕ್ರಮ. ನೀನು ಅದರಲ್ಲಿ ಒಂದು ಶಕ್ತಿಯಾಗಿದ್ದೆ. ನಿನ್ನಂತಹ ಅದ್ಭುತ ವ್ಯಕ್ತಿ ನನ್ನ ಹೃದಯದಲ್ಲಿ ನೆಲೆಸಿರುತ್ತಾರೆ ಎಂದು ಭಾವುಕವಾಗಿ ಪೋಸ್ಟ್ ಮಾಡಿದ್ದಾರೆ.
ಹಾಸ್ಯ ನಟನನ್ನು ಕಳೆದುಕೊಂಡ ತುಳು ಹಾಗೂ ಕನ್ನಡ ಇಂಡಸ್ಟ್ರಿ ರಾಕೇಶ್ ಪೂಜಾರಿ ನಿಧನಕ್ಕೆ ಬೇಸರ ವ್ಯಕ್ತಪಡಿಸುತ್ತಿದೆ.