ಧಾರವಾಡ : ಹಿಂದೂ ಎಂಬ ಪದ ತಂದಿದ್ದು ಕಾಂಗ್ರೆಸ್ ಪಕ್ಷ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ನಗರದಲ್ಲಿ ತೊಗಲು ಗೊಂಬೆಯಾಟದ ಉತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ಬಿಜೆಪಿಯವರು ಬೇರೆ ಬೇರೆ ರೀತಿಯಲ್ಲಿ ಬೈಯ್ಯುತ್ತಾರೆ. ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸುತ್ತಾರೆ. ನಮ್ಮ ಬಗ್ಗೆ ಇಲ್ಲ ಸಲ್ಲದ ಮಾತುಗಳನ್ನಾಡುತ್ತಾರೆ. ಜನರೂ ಸಹ ಕಾಂಗ್ರೆಸ್ ಅರ್ಥ ಮಾಡಿಕೊಳ್ಳುತ್ತಿಲ್ಲ. ಕಾಂಗ್ರೆಸ್ ಪಕ್ಷವನ್ನು ಹಿಂದೂಗಳು ದೊಡ್ಡ ಪ್ರಮಾಣದಲ್ಲಿ ಅರ್ಥ ಮಾಡಿಕೊಳ್ಳಬೇಕು. ಹಿಂದೂ ಎಂಬ ಪದ ತಂದಿದ್ದು ಕಾಂಗ್ರೆಸ್ ಪಕ್ಷ ಎಂದು ಹೇಳಿದ್ದಾರೆ.
ದೇಶದಲ್ಲಿ ಹಿಂದೂ ಎಂಬ ಪದ ಇರಲಿಲ್ಲ. ಡಾ. ಅಂಬೇಡ್ಕರ್ ಅವರು ಹಿಂದೂ ಎಂಬ ಬಿಲ್ ತಂದರು. ಅದನ್ನು ತರದಿದ್ದರೆ ನಾವು ಹೀಗೆ ಇರುತ್ತಿರಲಿಲ್ಲ. ಶೂದ್ರರನ್ನು ಕರೆಯಿರಿ, ಬ್ರಾಹ್ಮಣ, ವೈಷ್ಯರನ್ನು ಕರೆಯಿಸಿ ಎಂಬ ವ್ಯವಸ್ಥೆ ಇರುತ್ತಿತ್ತು. ಇತಿಹಾಸವನ್ನು ಜನ ಓದುವುದಿಲ್ಲ. ಮೂಲ ಸುಳ್ಳು ಹೇಳುವುದು ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.