ರಾಜ್ಯದಲ್ಲಿ ಭ್ರಷ್ಟ ಸರ್ಕಾರ ಇದೆ. ಗ್ಯಾರಂಟಿಗಳ ಹೆಸರಿನಲ್ಲಿ ಜನರನ್ನು ಮರಳು ಮಾಡುವ ಕೆಲಸ ನಡೆದಿದೆ ಎಂದು ಶಾಸಕ ಜನಾರ್ದನ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.
ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಸರ್ಕಾರ ರಾಕ್ಷಸ ಸರ್ಕಾರ. ಎಲ್ಲ ಮೀರಿ ಸಿದ್ದರಾಮಯ್ಯ ಜಾತಿಜನಗಣತಿ ಮೂಲಕ ಜಾತಿ ಜಾತಿಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಶಾಂತಿ ಕದಡುವ ಕೆಲಸವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕೆಟ್ಟ ಆಡಳಿತ ನಡೆಸಿದ್ದಾರೆ. ರಾಜ್ಯದ ಜನರು ಆಕ್ರೋಶ ಭರಿತವಾಗಿದ್ದಾರೆ. ಎಲ್ಲ ಜಿಲ್ಲೆಯಲ್ಲಿ ಜನಾಕ್ರೋಶ ಯಾತ್ರೆಗೆ ಒಳ್ಳೆಯ ಸ್ಪಂದನೆ ಸಿಗುತ್ತಿದೆ. ಜನರು ಈ ಸರ್ಕಾರವನ್ನು ಕಿತ್ತೊಗೆಯಲು ಸಜ್ಜಾಗಿದ್ದಾರೆ. ಹೀಗಾಗಿ ಈ ದಿಗ್ವಿಜಯ ಯಾತ್ರೆ ನಡೆಯುತ್ತಿದೆ. ಹಿಂದೂ ಸಂಸ್ಕೃತಿ ಮೇಲೆ ದಾಳಿ ನಡೆದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಜನಿವಾರ ತೆಗೆಯುವ ವಿಚಾರ ಸಾಮಾನ್ಯವಾದ ವಿಚಾರ ಅಲ್ಲ. ಬ್ರಾಹ್ಮಣತ್ವಕ್ಕೆ ಅಪಚಾರ ಮಾಡುವ ಕೆಲಸ ಮಾಡಿದ್ದಾರೆ. ಈ ಶಾಪದಲ್ಲೇ ಕಾಂಗ್ರೆಸ್ ಮುಳುಗಿ ಹೋಗುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.