ದಾವಣಗೆರೆ : ಭದ್ರಾ ಬಲದಂಡೆ ಹೋರಾಟ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದೆ. ಭದ್ರಾ ಬಲದಂಡೆ ನಾಲೆ ಕಾಮಗಾರಿ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದು, ಮಲೇಬೆನ್ನೂರಿನಲ್ಲಿ ನೀರಾವರಿ ನಿಗಮ ಕಾರ್ಯಪಾಲಕ ಇಂಜಿನಿಯರ್ ಕಚೇರಿ ಬಳಿ ಧರಣಿ ನಡೆಸಲಾಗಿದೆ.
ಹರಿಹರ ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀನಿವಾಸ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಬಿಜೆಪಿ ವಿರುದ್ಧ ಭಿತ್ತಿ ಪತ್ರಗಳನ್ನು ಹಿಡಿದು ಆಕ್ರೋಶ ವ್ಯಕ್ತಪಡಿಸಲಾಗಿದೆ. ಬಿಜೆಪಿ ಅಧಿಕಾರದ ಅವಧಿಯಲ್ಲೇ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ. ‘ಭದ್ರಾ ಡ್ಯಾಂಗೆ ಬಿಜೆಪಿ ನಾಯಕರೇ ಕಂಟಕ’. ‘ಅಂದು ಕಾಮಗಾರಿಗೆ ಅನುಮೋದನೆ ನೀಡಿ ಇಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲಾಯಿತು.