ಬೆಂಗಳೂರು: ಮಹಾಮಾರಿ ಕೋರೋನಾ ರಾಜ್ಯಕ್ಕೆ ಮತ್ತೆ ವಕ್ಕರಿಸಿದೆ, ಈ ಬಗ್ಗೆ ಈಗಾಗಲೇ ಬಿಬಿಎಂಪಿ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಅಲ್ಲದೇ ಕೋವಿಡ್ ಬಗ್ಗೆ ಆರೋಗ್ಯ ಇಲಾಖೆ ಸೂಚನೆಗೆ ಕಾಯುತ್ತಿದ್ದೇವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಹೇಳಿದ್ದಾರೆ.

ಈ ಕುರಿತು ಮಾದ್ಯಮರೊಂದಿಗೆ ಮಾತನಾಡಿದ ಅವರು SAARI ಕೇಸ್ ಗಳ ಬಗ್ಗೆ ಗಮನಹರಿಸುತ್ತಿದ್ದೇವೆ. ಈಗ ನಮ್ಮ ವ್ಯಾಪ್ತಿಯಲ್ಲಿ 71 ಕೇಸ್ ಗಳು ಪತ್ತೆಯಾಗಿದೆ. ಮಹದೇವಪುರ, ದಕ್ಷಿಣ ವಲಯದಲ್ಲಿ ಹೆಚ್ಚು ಕೇಸ್ ಪತ್ತೆಯಾಗಿದೆ. ಈಗ ಸರ್ವೇ, SAARI ಕೇಸ್ ಟೆಸ್ಟಿಂಗ್ ಮಾಡ್ತಿದ್ದೇವೆ. ರಾಜ್ಯ ಸರ್ಕಾರ, ಆರೋಗ್ಯ ಇಲಾಖೆಯ ನಿರ್ದೇಶನದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಕೇಸ್ ಜಾಸ್ತಿಯಾದ್ರೆ ಟೆಸ್ಟಿಂಗ್ ಮಾಡುತ್ತೇವೆ ಎಂದು ಹೇಳಿದರು.