ಮಳೆಯಿಂದಾಗಿ ಬೆಳೆ ಕಳೆದುಕೊಂಡು ರೈತರು ಕಂಗಾಲಾಗಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಅಕಾಲಿಕ ಮಳೆ ಮತ್ತು ಗಾಳಿಗೆ ನೂರಾರು ಎಕರೆ ತೋಟಗಾರಿಕೆ ಬೆಳೆಗೆ ಹಾನಿಯಾಗಿದೆ. ಕಳೆದ ಮಾರ್ಚ್ 20ರಿಂದ ಇಲ್ಲಿಯವರೆಗೆ 120 ಹೆಕ್ಟೆರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಬಾಳೆ, ಪಪ್ಪಾಯ, ಟೊಮೆಟೋ, ಬದನೆ, ತರಕಾರಿ ಸೇರಿದಂತೆ ಹಲವಾರು ಬೆಳೆಗಳು ನಾಶವಾಗಿವೆ.
70 ಹೆಕ್ಟೇರ್ ಬಾಳೆ, 29 ಹೆಕ್ಟೇರ್ ಪಪ್ಪಾಯ ಬೆಳೆ, ಇನ್ನುಳಿದಂತೆ ತರಕಾರಿ ಬೆಳೆ ಹಾನಿಯಾಗಿವೆ. ಮಳೆಯಿಂದಾಗಿ ಅಂದಾಜು 1 ಕೋಟಿ 65 ಲಕ್ಷ ರೂ. ಮೌಲ್ಯದ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಅಕಾಲಿಕ ಮಳೆ ಹೊಡೆತಕ್ಕೆ ಕಂಗಾಲಾದ ರೈತರು, ಪರಿಹಾರಕ್ಕಾಗಿ ಮನವಿ ಮಾಡಿದ್ದಾರೆ.