ಬೆಂಗಳೂರು: ರಾಜ್ಯದ ಜನರು ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ. ಈ ಮಧ್ಯೆ ಆಟೋ ದರ ಏರಿಕೆ ಮಾಡುವ ಕುರಿತು ಕೂಡ ಆರೋಪ ಕೇಳಿ ಬಂದಿತ್ತು. ಆದರೆ, ಇನ್ನೂ ಬೆಲೆ ಏರಿಕೆಯಾಗಲ್ಲ. ಈ ಕುರಿತು ಚರ್ಚೆಗಳು ನಡೆಯುತ್ತಿವೆ ಅಷ್ಟೇ. ಏರಿಕೆಯ ನಿರ್ಧಾರ ಕೈಗೊಳ್ಳುವುದಕ್ಕೂ ಮುನ್ನವೇ ಹಗಲು ದರೋಡೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
ಆಟೋ ದರ ಏರಿಕೆಗೂ ಮುನ್ನವೇ ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಗ್ರಾಹಕರಿಂದ ದುಪ್ಪಟ್ಟು ಹಣ ವಸೂಲಿ ಮಾಡಲು ಅಗ್ರಿಗೇಟರ್ ಕಂಪನಿಗಳು ಮುಂದಾಗಿವೆ ಎಂಬ ಆರೋಪ ಕೇಳಿ ಬಂದಿದೆ. ಆನ್ಲೈನ್ ಆಟೋ ಅಗ್ರಿಗೇಟರ್ ಕಂಪನಿಗಳು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಅತಿಯಾದ ದರ ವಸೂಲಿಗೆ ಮುಂದಾಗಿದ್ದಾರೆ ಎನ್ನಲಾಗಿದೆ.
ಇಷ್ಟಿದ್ದರೂ ಸಾರಿಗೆ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ನಿಯಮದಂತೆ, ಮೊದಲ ಎರಡು ಕಿಲೋ ಮೀಟರ್ಗೆ 30ರೂ ಪಡೆಯಬೇಕು. ನಂತರ ಪ್ರತಿ ಕಿಲೋ ಮೀಟರ್ಗೆ 15 ರೂಪಾಯಿ ಹೆಚ್ಚುವರಿ ಪಡೆಯಬೇಕು. ಆದರೆ, ಅಗ್ರಿಗೇಟರ್ ಕಂಪನಿಗಳು ಹಗಲು ದರೋಡೆಗೆ ಇಳಿದು ದುಪ್ಪಟ್ಟು ಹಣ ಕೇಳುತ್ತಿದ್ದಾರೆ. ಇವರ ದರ ವಸೂಲಿಗೆ ಅಂತ್ಯ ಯಾವಾಗ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.