ಬೆಂಗಳೂರು: ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ತಮ್ಮೇಶ್ ಗೌಡ ಅವರು ಸಚಿವ ಕೃಷ್ಣಬೈರೇಗೌಡ ವಿರುದ್ಧ ಸಿಎಂಗೆ ಪತ್ರ ಬರೆದಿದ್ದಾರೆ.

ಸಚಿವ ಕೃಷ್ಣಭೈರೇಗೌಡ ಅವರಿಗೆ ಬುದ್ಧಿವಾದ ಹೇಳುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ. ಸಚಿವರು ಕ್ಷೇತ್ರದಲ್ಲಿ ನಿಷ್ಕ್ರಿಯರಾಗಿದ್ದಾರೆ. ಕೃಷ್ಣಬೈರೇಗೌಡ ಅವರು 2008ರಿಂದ ಸತತವಾಗಿ ಶಾಸಕರಾಗಿ ಆಯ್ಕೆಯಾಗುತ್ತಿದ್ದಾರೆ. ಆದರೆ, ಕ್ಷೇತ್ರದಲ್ಲಿ ಇದುವರೆಗೂ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ರಸ್ತೆಯಲ್ಲಿ ಗುಂಡಿಗಳಿದ್ದು, ಕಸದಿಂದ ಕ್ಷೇತ್ರ ಗಬ್ಬೆದ್ದು ನಾರುತ್ತಿದೆ.

ಕ್ಷೇತ್ರದಲ್ಲಿರುವ ಯುವಕರಿಗೆ ಸಮರ್ಪಕವಾಗಿ ಕೆಲಸ ಸಿಗುತ್ತಿಲ್ಲ. ಶಾಸಕರಾಗಿ, ಸಚಿವರಾಗಿ ಎಲ್ಲದರಲ್ಲೂ ಫೇಲ್ ಆಗಿದ್ದಾರೆ. ಹೀಗಾಗಿ ಅವರನ್ನು ಕರೆದು ಬುದ್ಧಿವಾದ ಹೇಳಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.