ಬೆಂಗಳೂರು: ಡೆಂಟಲ್ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಈ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸೌಮ್ಯ ಗಣೇಶ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ರಾಜಾಜಿನಗರ ಖಾಸಗಿ ಕಾಲೇಜಿನಲ್ಲಿ ದ್ವೀತಿಯ ವರ್ಷದ ಡೆಂಟಲ್ ಓದುತ್ತಿದ್ದಳು. ಆದರೆ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.
ಇತ್ತೀಚೆಗಷ್ಟೇ ಕುಟುಂಬಸ್ಥರು ಕೌನ್ಸೆಲಿಂಗ್ ಮಾಡಿಸಿದ್ದರು ಎನ್ನಲಾಗಿದೆ. ಪರೀಕ್ಷೆಗಳು ಇದ್ದ ಸಂದರ್ಭದಲ್ಲಿ ಆತಂಕಕ್ಕೆ ಒಳಗಾಗುತ್ತಿದ್ದಳು ಎನ್ನಲಾಗಿದೆ. ಖಿನ್ನತೆಯಿಂದಲೇ ಆತ್ಮಹತ್ಯೆಗೆ ಶರಣಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಹೆಬ್ಬಾಳ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.