ಪಾದಚಾರಿ ಮೇಲೆ ಲಾರಿ ಹತ್ತಿಸಿರುವ ಘಟನೆ ಯಲಹಂಕದಲ್ಲಿ ನಡೆದಿದೆ. ಯಲಹಂಕ ಸ್ಪರ್ಶ ಆಸ್ಪತ್ರೆ ಬಳಿ ಈ ಘಟನೆ ನಡೆದಿದೆ. ಘಟನೆ ನಡೆಯುತ್ತಿದ್ದಂತೆ ಚಾಲಕ ಲಾರಿ ಬಿಟ್ಟು ಪರಾರಿಯಾಗಲು ಯತ್ನಿಸಿದ್ದಾರೆ.
ಕೂಡಲೇ ಸ್ಥಳೀಯರು ಅತನನ್ನು ಹಿಡಿದು ಯಲಹಂಕ ಸಂಚಾರಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಕುಡಿದು ವಾಹನ ಚಾಲನೆ ಮಾಡಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಯಲಹಂಕ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ ವ್ಯಕ್ತಿಯನ್ನು ಚಿಂತೋಟಿ ಚಿನ್ನ ವೆಂಕಟರಮಣ (45) ಎಂದು ಗುರುತಿಸಲಾಗಿದೆ. ವೆಂಕಟರಮಣ ಮೂಲತಃ ಮದನಪಲ್ಲಿ ಮೂಲದ ವ್ಯಕ್ತಿ ಎನ್ನಲಾಗಿದೆ. ಅಲ್ಲಾಳಸಂದ್ರದ ಅಣ್ಣನ ಮನೆಗೆ ಆಗಾಗ ಬರುತ್ತಿದ್ದ. ಈ ವೇಳೆ ರಸ್ತೆ ದಾಟುವಾಗ ಅಪಘಾತ ಸಂಭವಿಸಿದೆ. ಮೃತದೇಹವನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.