ಬೆಂಗಳೂರು: ಗಾಲಿ ಜನಾರ್ದನ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹರಾಗಿದ್ದು, ಮುಂದಿನ 6 ತಿಂಗಳೊಳಗೆ ಗಂಗಾವತಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ.
ಈ ಕುರಿತು ಕರ್ನಾಟಕ ನ್ಯೂಸ್ ಬೀಟ್ಗೆ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರಿಂದ ಮಾಹಿತಿ ಲಭ್ಯವಾಗಿದೆ. ಗಾಗಿ ಜನಾರ್ದನ ರೆಡ್ಡಿ ಪ್ರತಿನಿಧಿಸುತ್ತಿದ್ದ ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನಸಭಾ ಕ್ಷೇತ್ರಕ್ಕೆ 6 ತಿಂಗಳಲ್ಲಿ ಚುನಾವಣೆ ನಡೆಯಲಿದೆ.
ಗಾಲಿ ಜನಾರ್ದನ ರೆಡ್ಡಿ ಅನರ್ಹತೆಯಿಂದ ಗಂಗಾವತಿ ವಿಧಾನಸಭಾ ಕ್ಷೇತ್ರ ತೆರವಾಗಿದೆ. ಗಾಲಿ ಜನಾರ್ದನ ರೆಡ್ಡಿ ಅವರ ಶಾಸಕ ಸ್ಥಾನ ಅನರ್ಹ ಎಂದು ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಆದೇಶ ಹೊರಡಿಸಿದ್ದಾರೆ. ಯಾವುದೇ ಕ್ಷೇತ್ರ ಖಾಲಿಯಾದ್ರೆ, ಆ ಕ್ಷೇತ್ರಕ್ಕೆ ಮುಂದಿನ 6 ತಿಂಗಳಲ್ಲಿ ಉಪ-ಚುನಾವಣೆ ನಡೆಸಬೇಕು. ಹೀಗಾಗಿ, ಸದ್ಯ ಗಾಲಿ ಜನಾರ್ದನ ರೆಡ್ಡಿ ಅನರ್ಹಗೊಂಡಿರುವ ಕಾರಣಕ್ಕೆ ಮುಂದಿನ 6 ತಿಂಗಳಲೊಳಗೆ ಗಂಗಾವತಿ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿದೆ.