ಭಾರತೀಯ ಜನತಾ ಪಾರ್ಟಿ ಬೆಂಗಳೂರು ದಕ್ಷಿಣ ಜಿಲ್ಲೆ ವತಿಯಿಂದ ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ದಾಳಿಯಲ್ಲಿ ಮಡಿದವರಿಗೆ ಭಾವ ಪೂರ್ಣ ಶ್ರದ್ದಾಂಜಲಿ ಸಲ್ಲಿಸಿ ಮೌನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸಹ ಸರ ಕಾರ್ಯವಾಹ ಶ್ರೀ ನಾ. ತಿಪ್ಪೇಸ್ವಾಮಿರವರು, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷರಾದ ಸಿ ಕೆ ರಾಮಮೂರ್ತಿ, ಬಸವನಗುಡಿ ಶಾಸಕರಾದ ರವಿಸುಬ್ರಮಣ್ಯ ರವರು, ರಾಜ್ಯ ವಕ್ತಾರರಾದ ಅಶ್ವಥ್ ನಾರಾಯಣ್ ರವರು ಹಾಗೂ ಬಿಬಿಎಂಪಿಯ ಮಾಜಿ ಸದಸ್ಯರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.