ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯರನ್ನು ಉಚ್ಚಾಟಿಸಿ, ನಂತರ ನನ್ನ ಉಚ್ಛಾಟಿಸಿ ಎಂದು ಬಿಜೆಪಿ ಶಾಸಕ ಬಿ.ಪಿ.ಹರೀಶ್ ಹೇಳಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆಯೂ ನಾನು ಇದನ್ನು ಹೇಳಿದ್ದೆ. ಪಕ್ಷದ ದೃಷ್ಟಿಯಿಂದ, ರಾಜ್ಯದ ದೃಷ್ಟಿಯಿಂದ ಹಾಗೂ ರಾಜಕೀಯ ನಾಯಕರ ಮೇಲಿನ ಜನರ ನಿರಾಸಕ್ತಿ ಕಡಿಮೆ ಆಗಬೇಕು ಅಂದ್ರೆ ಈ ಕ್ರಮ ಆಗಲೇಬೇಕು. ಹೀಗಾಗಿ ಅವರನ್ನು ಪಕ್ಷದಿಂದ ತೆಗೆದು ಹಾಕಿ. ಆನಂತರ ನನ್ನನ್ನು ತೆಗೆಯಿರಿ ಎಂದು ಸವಾಲು ಹಾಕಿದ್ದಾರೆ.
ಈ ಕೆಲಸ ಮಾಡಿದರೆ ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಒಳ್ಳೆಯದಾಗುತ್ತದೆ ಎಂದಿದ್ದಾರೆ.