ತುಮಕೂರು: ಕಾರು ಹಾಗೂ ಕ್ಯಾಂಟರ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಕುಣಿಗಲ್ (Kunigal) ತಾಲ್ಲೂಕಿನ ಬಿದನೆಗೆರೆ ಬಳಿ ಈ ಘಟನೆ ನಡೆದಿದೆ. ಶೋಭಾ (41) ದುಂಬಿಶ್ರೀ, ಭಾನು, ಕಿರಣ್ ಸಾವನ್ನಪ್ಪಿರುವ ದುರ್ದೈವಿಗಳು ಎನ್ನಲಾಗಿದೆ. ಕುಣಿಗಲ್ ಬಳಿಯ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿ-48 ರಲ್ಲಿ ಬರುವ ಬೈಪಾಸ್ ನಲ್ಲಿ ಯೂಟರ್ನ್ ತೆಗೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ ಕ್ಯಾಂಟರ್, ಕಾರಿಗೆ ಡಿಕ್ಕಿ ಹೊಡೆದಿದೆ. ಸಾವನ್ನಪ್ಪಿದವರು ಮಾಗಡಿ ತಾಲೂಕಿನ ಯಲಗಲವಾಡಿ ಹ್ಯಾಂಡ್ ಪೊಸ್ಟ್ ನಿವಾಸಿಗಳು ಎನ್ನಲಾಗಿದೆ.
ಡಿಕ್ಕಿಯಾದ ರಭಸಕ್ಕೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಕುಣಿಗಲ್ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.