ಬೆಂಗಳೂರು: ವ್ಯಕ್ತಿಯೊಬ್ಬ ಕೋರ್ಟ್ (Court) ಆವರಣದಲ್ಲಿ ವಕೀಲರೊಬ್ಬರ (Lawyer) ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಹೊಸೂರು (Hosuru) ಕೋರ್ಟ್ ಬಳಿ ಈ ಘಟನೆ ನಡೆದಿದೆ. ಕಣ್ಣನ್ (30) ಹಲ್ಲೆಗೊಳಗಾದ ವಕೀಲ ಎನ್ನಲಾಗಿದೆ. ಆರೋಪಿ ಆನಂದ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ. ಹಲ್ಲೆಯ ನಂತರ ಆರೋಪಿ ಆನಂದ ಕೋರ್ಟ್ ಗೆ ಶರಣಾಗಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಾಯಾಳು ವಕೀಲರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಾಳು ಕಣ್ಣನ್ ಸಾವು- ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಜಮೀನು ವ್ಯಾಜ್ಯ ಸಂಬಂಧ ಈ ಹಲ್ಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಆರೋಪಿ ಆನಂದ ವಕೀಲರೊಬ್ಬರ ಬಳಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. ಹೊಸೂರು ಕೋರ್ಟ್ ನಲ್ಲಿ ವಕೀಲಳಾಗಿ ಆರೋಪಿ ಪತ್ನಿ ಕಾರ್ಯ ನಿರ್ವಹಿಸುತ್ತಿದ್ದಳು. ಆರೋಪಿ ಪತ್ನಿ ಜೊತೆ ಕಣ್ಣನ್ ಅಕ್ರಮ ಸಂಬಂಧ ಹೊಂದಿದ್ದ ಎಂಬ ಆರೋಪ ಕೂಡ ಕೇಳಿ ಬಂದಿದೆ. ಹೀಗಾಗಿ ಈ ಘಟನೆ ನಡೆದಿದೆ ಎಂಬ ಆರೋಪ ಕೂಡ ಕೇಳಿ ಬಂದಿದೆ. ಹೊಸೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ತನಿಖೆ ಕೈಗೊಂಡಿದ್ದಾರೆ.