ಬೆಂಗಳೂರು: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಎಕ್ಸ್ಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಕಾಮತ್ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.
ಅಮೂಲ್ಯ ಕಾಮತ್ 600ಕ್ಕೆ 599 ಅಂಕ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಪಿಸಿಎಂಸಿ ಅಧ್ಯಯನ ಮಾಡಿದ್ದರಿಂದಾಗಿ ಮುಂದೆ ಇಂಜಿನಿಯರ್ ಆಗಬೇಕು ಎಂಬ ಕನಸು ಇದೆ. ಭರತನಾಟ್ಯದಲ್ಲಿ ಹಾಗೂ ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ತರಬೇತು ಪಡೆದಿದ್ದೇನೆ. ಶಿಕ್ಷಕರು ಕೂಡ ನೀನು ಉತ್ತಮ ಅಂಕ ಗಳಿಸಬಹುದು ಎನ್ನುತ್ತಿದ್ದರು. ನಾನು ಕೂಡ ಉತ್ತಮ ಅಂಕ ಪಡೆಯುವ ಭರವಸೆಯಲ್ಲೇ ಓದಿದ್ದೆ. ಈಗ ಶಿಕ್ಷಕರು ಹಾಗೂ ಪಾಲಕರ ಸಹಕಾರದಿಂದ ಅದು ಸಾಧ್ಯವಾಯಿತು ಎಂದು ಅಮೂಲ್ಯ ಹೇಳಿದ್ದಾರೆ.