ಬೆಂಗಳೂರು: ನಗರದಲ್ಲಿ ವ್ಯಕ್ತಿಯ ಬರ್ಬರ ಹತ್ಯೆ ನಡೆದಿರುವ ಘಟನೆ ನಡೆದಿದೆ.
ಮಾರ್ಟಿನ್ ಸೈಮನ್ ( 28) ಕೊಲೆಯಾಗಿರುವ ವ್ಯಕ್ತಿ. ಮಡಿವಾಳದ ವೆಂಕಟೇಶ್ವರ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಎಣ್ಣೆ ಪಾರ್ಟಿ ವೇಳೆ ಗಲಾಟೆ ನಡೆದ ಹಿನ್ನೆಲೆಯಲ್ಲಿ ತಲೆಯ ಮೇಲೆ ಸಿಮೆಂಟ್ ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ರಾಜ್ ಎಂಬಾತ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೊಲೆಯಾದ ಮಾರ್ಟಿನ್ ಸೈಮನ್ ಮತ್ತು ಆರೋಪಿತ ರಾಜ್ ಒಂದೇ ಬಿಲ್ಡಿಂಗ್ ನಲ್ಲಿ ಬಾಡಿಗೆಗೆ ವಾಸವಾಗಿದ್ದರು. ನಿನ್ನೆ ಸಂಜೆ ಬಿಲ್ಡಿಂಗ್ ಟೇರೆಸ್ ಮೇಲೆ ಪಾರ್ಟಿ ಮಾಡುತ್ತಿದ್ದರು. ರಾತ್ರಿ ಹತ್ತು ಗಂಟೆ ವೇಳೆ ಇಬ್ಬರ ಮಧ್ಯೆ ಜಗಳ ನಡೆದಿದೆ. ಈ ವೇಳೆ ಅಲ್ಲೇ ಇದ್ದ ಸಿಮೆಂಟ್ ಇಟ್ಟಿಗೆಯಿಂದ ತಲೆ ಮೇಲೆ ಹಾಕಿ ಕೊಲೆ ಮಾಡಿದ್ದಾನೆ. ಈ ಕುರಿತು ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.