ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದಾಗಿ ಆತಂಕ ಮನೆ ಮಾಡುತ್ತಿದೆ.
ಈ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಅವರ ಗಮನ ಸೆಳೆಯಲು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಎನ್ ಡಿಎ ಸಂಸದ ಡಾ. ಸಿ.ಎನ್. ಮಂಜುನಾಥ್ ಮುಂದಾಗಿದ್ದಾರೆ. ಅಲ್ಲದೇ, ಈ ಕುರಿತು ವರದಿಯೊಂದನ್ನು ಸಿದ್ಧಪಡಿಸಿದ್ದಾರೆ.
ಇದಕ್ಕೆ ಕೆಂದ್ರ ಹಾಗೂ ರಾಜ್ಯ ಸರ್ಕಾರ ಜಂಟಿಯಾಗಿ ಸಮಿತಿಯೊಂದನ್ನು ರಚಿಸಬೇಕು. ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆಯಿಂದ ವಿಶೇಷ ಅಧ್ಯಯನ ನಡೆಸುವ ಅಗತ್ಯವಿದ್ದು, ಇದಕ್ಕೆ ಬೇಕಾದ ಏರ್ಪಾಟು ಸರ್ಕಾರ ಮಾಡಬೇಕು. ಇಷ್ಟು ಮಾತ್ರವಲ್ಲದೇ, ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗುವುದು ಯಾವ ಕಾರಣಕ್ಕೆ ಎಂಬುವುದನ್ನು ಅಧ್ಯಯನದಿಂದ ಅರಿತು, ಜಾಗೃತಿ ಮೂಡಿಸಬೇಕು. ಈ ನಿಟ್ಟಿನಲ್ಲಿ ಪ್ರಧಾನಿಗಳ ಗಮನ ಸೆಳೆಯಲು ಹೃದಯ ಸಂಬಂಧಿ ಕಾಯಿಲೆಗಳ ಬಗ್ಗೆ ವರದಿ ಸಿದ್ಧಪಡಿಸಿಕೊಂಡಿದ್ದಾರೆ. ಸದ್ಯದಲ್ಲೇ ವರದಿಯನ್ನು ಪ್ರಧಾನಿಗಳಿಗೆ ಹಸ್ತಾಂತರ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ.