ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಟ್ರಾಫಿಕ್ ಜಾಮ್ ಉಂಟಾಗಿದೆ. ಅಲ್ಲದೇ, ಪಂದ್ಯಕ್ಕೆ ಅಡ್ಡಿಯಾಗಿದೆ. ಹೀಗಾಗಿ ಪಂದ್ಯ ರದ್ದು ಮಾಡಲಾಗಿದೆ.
ಶನಿವಾರ ಸಂಜೆ ನಗರದ ಬಹುತೇಕ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಿದೆ. ಮೆಜೆಸ್ಟಿಕ್, ರಾಜಾಜಿನಗರ ಶಾಂತಿನಗರ, ಕಾರ್ಪೊರೇಷನ್, ಕಬ್ಬನ್ ಪಾರ್ಕ್, ಚಿನ್ನಸ್ವಾಮಿ ಮೈದಾನ, ವಿಧಾನಸೌಧ, ಕೆ.ಆರ್.ಮಾರ್ಕೆಟ್ ಸೇರಿದಂತೆ ಹಲವೆಡೆ ವ್ಯಾಪಕ ಮಳೆಯಾಗಿದೆ.
ಆರ್ ಸಿಬಿ ಹಾಗೂ ಕೆಕೆಆರ್ ನಡುವಿನ ಪಂದ್ಯ ಮಳೆಯಿಂದಾಗ ರದ್ದಾಗಿದೆ. ಮಳೆಯಿಂದಾಗಿ ರಸ್ತೆಯಲ್ಲೆಲ್ಲ ನೀರು ನಿಂತು, ವಾಹನ ಸವಾರರು ಪರದಾಟು ನಡೆಸುವಂತಾಗಿತ್ತು. ಹೀಗಾಗಿ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಹಲವೆಡೆ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಜನ ಪರದಾಟ ನಡೆಸಿದ್ದಾರೆ.