ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಜಾತಿಗಣತಿಗೆ ತಾತ್ವಿಕ ಒಪ್ಪಿಗೆಯಂತೆ; ಆದರೆ ಮರು ಗಣತಿಯಂತೆ; ಸಿಎಂ ನಿರ್ಧಾರಕ್ಕೆ ಹೈಕಮಾಂಡ್ ಎಳ್ಳು ನೀರು

June 10, 2025
Share on WhatsappShare on FacebookShare on Twitter

ರಾಜ್ಯ ರಾಜಕೀಯ ಪಡಸಾಲೆಯಲ್ಲಿ ಈಗ ಚಿನ್ನಸ್ವಾಮಿ ಸ್ಟೇಡಿಯಂ ಹೊರಗಿನ ಕಾಲ್ತುಳಿತ ಪ್ರಕರಣ ದೊಡ್ಡ ಸದ್ದು ಮಾಡುತ್ತಿದೆ. ಸತ್ತವರ ಹೆಣದ ಮೇಲೆ ರಾಜಕೀಯ ತಾಲೀಮು ಜೋರಾಗಿ ನಡೆಯುತ್ತಿದೆ. ಸಮಾಜಕ್ಕೆ ಹಿತವೋ? ಅಹಿತವೋ? ಗೊತ್ತಿಲ್ಲ ರಾಜಕಾರಣಿಗಳ ಮಾತಿಗೆ ಪ್ರತಿಮಾತು ನಡೆಯುತ್ತಲೇ ಇದೆ. ಅದು ಚಟವೂ ಹೌದು..ಆದರೆ, ಕುಟುಂಬಸ್ಥರನ್ನು ಕಳೆದುಕೊಂಡವರ ಆಕ್ರಂದನ ಮಾತ್ರ ಮುಗಿಲು ಮುಟ್ಟಿದೆ. ರಾಜಕಾರಣವೇ ಹಾಗೆ.. ಆಡಳಿತ ಪಕ್ಷವನ್ನು ಹಣಿಯಲು ವಿಪಕ್ಷಗಳು, ವಿಪಕ್ಷಗಳನ್ನು ಹಣಿಯಲು ಆಡಳಿತ ಪಕ್ಷ ಹೋರಾಡುತ್ತಲೇ ಇರುತ್ತವೆ. ಇತ್ತೀಚೆಗಷ್ಟೇ ರಾಜಕೀಯ ಹೋರಾಟಕ್ಕೆ ಜಾತಿಯೂ ಅಂಟಿಕೊಂಡಿತ್ತು. ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ಬಿಡುಗಡೆ ಮುಂದಾಗಿದ್ದರು. ಇದಕ್ಕೆ ಸ್ವಪಕ್ಷದವರಿಂದಲೇ ವಿರೋಧ ವ್ಯಕ್ತವಾಗಿತ್ತು. ಆದರೂ ಬಿಡುಗಡೆಗೆ ತೆರೆಯ ಹಿಂದೆ ಸಿಎಂ ಕಸರತ್ತು ನಡೆಸಿದ್ದರು. ಈಗ ಅದಕ್ಕೆ ಹೈಕಮಾಂಡ್ ರೆಡ್ ಸಿಗ್ನಲ್ ನೀಡಿದೆ.

ಜಾತಿಗಣತಿ ಬಿಡುಗಡೆಗೆ ಬ್ರೇಕ್ ಹಾಕಿದ ಹೈಕಮಾಂಡ್
ಸಿಎಂ ಸಿದ್ದರಾಮಯ್ಯಗೆ ಭಾರೀ ಹಿನ್ನಡೆ
ಮರು ಸಮೀಕ್ಷೆಗೆ ಸೂಚಿಸಿದ ಹೈಕಮಾಂಡ್

ಜಾತಿಗಣತಿ ವರದಿ ಬಿಡುಗಡೆಗೆ ವಿರೋಧ ಪಕ್ಷಗಳು ಮಾತ್ರವಲ್ಲದೆ, ಕಾಂಗ್ರೆಸ್ ಪಕ್ಷದ ಹಲವು ನಾಯಕರು ಕೂಡ ವಿರೋಧ ವ್ಯಕ್ತಪಡಿಸಿದ್ದರು. ರಾಜ್ಯದಲ್ಲಿನ ಪ್ರಬಲ ಸಮುದಾಯವಾಗಿರುವ ಲಿಂಗಾಯತರು ಹಾಗೂ ಒಕ್ಕಲಿಗ ನಾಯಕರು, ಮಠಾಧೀಶರು, ಮುಖಂಡರು ಇದನ್ನು ವಿರೋಧಿಸಿದ್ದರು. ಈಗ ಹೈಕಮಾಂಡ್ ಕೂಡ ಇದಕ್ಕೆ ಧ್ವನಿಗೂಡಿಸಿದ್ದು, ಮತ್ತೊಮ್ಮೆ ಗಣತಿ ನಡೆಸುವಂತೆ ಸೂಚಿಸಿದೆ. ಇದು ಸಿಎಂ ಸಿದ್ದರಾಮಯ್ಯ ನಿರಾಸೆಗೆ ಕಾರಣವಾಗಿದೆ.
ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ದೆಹಲಿ ಪ್ರವಾಸ ಕೈಗೊಂಡಿದ್ದರು. ಈ ವೇಳೆ ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸುರ್ಜೆವಾಲ, ಕೆಸಿ ವೇಣುಗೋಪಾಲ್‌ ಅವರನ್ನು ಭೇಟಿ ಮಾಡಿದ್ದರು. ಈ ನಾಯಕರ ಸಭೆಯಲ್ಲಿ ಜಾತಿಗಣತಿ ವರದಿಯ ದತ್ತಾಂಶ ಸರಿಯಿಲ್ಲ. ಕಾಲ ಮಿತಿಯಲ್ಲಿ ಮರು ಗಣತಿ ಮಾಡಿ ಎಂದು ಸೂಚಿಸಿದೆ ಎನ್ನಲಾಗಿದೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾದಂತಾಗಿದೆ. ಅದರಲ್ಲೂ ಸಿಎಂ ಸಿದ್ದರಾಮಯ್ಯ ಅವರಿಗಂತೂ ವೈಯಕ್ತಿಕವಾಗಿ ದೊಡ್ಡ ಹಿನ್ನಡೆಯಾಗಿದೆ. ಜಾತಿ ಗಣತಿ ವರದಿ ಎಂಬ ಶಬ್ದ ಬಂದಾಗಿನಿಂದಲೂ ವಿರೋಧಿಸುತ್ತಿದ್ದ ಡಿಕೆಯಂತೂ ಈಗ ಮುಸಿಮುಸಿ ನಗುವಂತಾಗಿದೆ.

ಯಾವ ಕಾರಣಕ್ಕೆ ಜಾತಿ ಗಣತಿ ತಿರಸ್ಕಾರ?
ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದ್ದೇನು?
ಪ್ರಬಲ ಸಮುದಾಯಗಳ ಬೇಡಿಕೆಗೆ ಮಣಿಯಿತೇ ಹೈಕಮಾಂಡ್?

ಹೌದು! ಒಂದು ರೀತಿ ನೋಡಿದರೆ ಕಾಂಗ್ರೆಸ್ ಹೈಕಮಾಂಡ್ ಜಾತಿ ಗಣತಿ ವಿರೋಧಿಯಲ್ಲ. ಜಾತಿ ಗಣತಿ ಬಗ್ಗೆ ರಾಹುಲ್ ಗಾಂಧಿ ಕಳೆದ ಚುನಾವಣೆಯಿಂದಲೂ ಮಾತನಾಡುತ್ತಿದ್ದರು. ಕೇಂದ್ರ ಸರ್ಕಾರ ಜಾತಿ ಗಣತಿಯ ನಿರ್ಧಾರಕ್ಕೆ ಬಂದಾಗ ರಾಹುಲ್ ನಮ್ಮದೇ ಕಾಪಿ ಇದು ಎಂದಿದ್ದರು. ರಾಜ್ಯದಲ್ಲಿ ಮಾಡಿದ ವರದಿಯನ್ನು ಮಾತ್ರ ಈಗ ತಿರಸ್ಕಾರ ಮಾಡಿದ್ದಾರೆ. ಆದರೆ, ಮರು ವರದಿ ಸಿದ್ಧಪಡಿಸಲು ಕೂಡ ಸೂಚಿಸಲಾಗಿದೆ. ಈ ವರದಿ ತಿರಸ್ಕಾರಕ್ಕೆ ಕಾರಣಗಳನ್ನು ಹುಡುಕುತ್ತ ಹೋದರೆ, ಸದ್ಯದ ವರದಿಗೆ ಹಲವಾರು ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಪಕ್ಷದ ಕೆಲವು ಹಿರಿಯ ನಾಯಕರಂತೂ ಬಹಿರಂಗವಾಗಿಯೇ ವಿರೋಧಿಸಿದ್ದರು. ಇದು 9 ರಿಂದ 10 ವರ್ಷ ಹಳೆಯ ವರದಿ ಎಂದು ಆರೋಪಿಸಲಾಗಿತ್ತು. ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯದವರ ಅಂಕಿ- ಸಂಖ್ಯೆ ಹಾಗೂ ಒಳ ಜಾತಿಗಳ ಲೆಕ್ಕಾಚಾರದಲ್ಲಿ ಅಸಮಾಧಾನ ವ್ಯಕ್ತವಾಗಿತ್ತು. ಹಲವಾರು ಮಠಾಧೀಶರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು. ಹಲವು ಮಠಾಧೀಶರಂತೂ ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ವರದಿಯ ಅಂಕಿ-ಸಂಖ್ಯೆ ಭಾರೀ ಆಕ್ಷೇಪಕ್ಕೆ ಕಾರಣವಾಗಿತ್ತು. ವರದಿ ಮಂಡನೆಯಾದರೆ ರಾಜಕೀಯ ಸಂಚಲನವೇ ಸೃಷ್ಟಿಯಾಗಬಹುದು ಎಂಬ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಈ ತಂತ್ರ ರೂಪಿಸಿದೆ ಎನ್ನಲಾಗುತ್ತಿದೆ.

ಜೂ. 12ಕ್ಕೆ ಮಹತ್ವದ ತೀರ್ಮಾನಕ್ಕೆ ಮುಂದಾಗಿದ್ದ ಸರ್ಕಾರ
ವಿಶೇಷ ಸಚಿವ ಸಂಪುಟದಲ್ಲಿ ನಿರ್ಣಯ ತೆಗೆದುಕೊಳ್ಳಲು ಸಿದ್ಧತೆ
ಸಿಎಂ ಓಟಕ್ಕೆ ಬಿತ್ತು ಬ್ರೇಕ್?

ಜಾತಿಗಣತಿ ಕುರಿತು ಸರ್ಕಾರ ಕೂಡ ತರಾತುರಿಯಲ್ಲಿ ನಿರ್ಣಯ ಕೈಗೊಳ್ಳಲು ಮುಂದಾಗಿತ್ತು. ಜೂನ್ 12ರಂದು ವಿಶೇಷ ಸಚಿವ ಸಂಪುಟ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿತ್ತು. ಆ ಸಂದರ್ಭದಲ್ಲಿ ಜಾತಿಗಣತಿ ವರದಿಯನ್ನು ಅಂಗೀಕರಿಸಲು ಸಿದ್ದರಾಮಯ್ಯ ಮುಂದಾಗಿದ್ದರು ಎನ್ನಲಾಗುತ್ತಿದೆ. ಆದರೆ, ಅದಕ್ಕೂ ಮುನ್ನವೇ ಹೈಕಮಾಂಡ್ ಚೆಕ್ ಮೇಟ್ ನೀಡಿದೆ. ಇದು ಸಿದ್ದರಾಮಯ್ಯ ಅವರಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ. ರಾಜ್ಯ ಕಾಂಗ್ರೆಸ್ ನಾಯಕರ ಮಾತಿಗೆ ಕ್ಯಾರೇ ಅನ್ನದ ಸಿಎಂ ಈಗ ಹೈಕಮಾಂಡ್ ಮಾತಿಗೆ ತಲೆ ತಗ್ಗಿಸಬೇಕಾಗಿದೆ. ಹೀಗಾಗಿ ಪಕ್ಷದಲ್ಲೇ ಜಾತಿ ಗಣತಿ ವಿರೋಧಿಸುತ್ತಿದ್ದವರು ಈಗ ಮುಸಿ ಮುಸಿ ನಗುವಂತಾಗಿದೆ.

ಮರು ಜಾತಿ ಗಣತಿ ಘೋಷಿಸಿದ ಸಿಎಂ
ಕಾಂಗ್ರೆಸ್ ವಿರುದ್ಧ ಬಿಜೆಪಿ, ಜೆಡಿಎಸ್ ವಾಗ್ದಾಳಿ
ತಾತ್ವಿಕ ಒಪ್ಪಿಗೆ ಮಾತುಗಳನ್ನಾಡಿದ ಸಿಎಂ

ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆಯಂತೆ ಮರುಜಾತಿ ಗಣತಿಯನ್ನು ಸಿದ್ದರಾಮಯ್ಯ ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ತಾವು ಎಷ್ಟೇ ವಿರೋಧಿಸಿದರು ಕೇಳದೇ ಜಾತಿಗಣತಿ ವರದಿ ಮಂಡನೆಗೆ ಮುಂದಾಗಿದ್ದ ಸಿದ್ದರಾಮಯ್ಯ, ಈಗ ಹೈಕಮಾಂಡ್ ಕಿವಿ ಹಿಂಡುತ್ತಿದ್ದಂತೆ ತನ್ನದೇ ಸರ್ಕಾರದ ವರದಿಯನ್ನು ಕಸಕ್ಕೆ ಎಸೆದು, ಮತ್ತೊಮ್ಮೆ ಮರು ಗಣತಿ ಮಾಡಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಮೂಲಕ ರಾಜ್ಯದ ಜನತೆಗೆ ಮೋಸ ಮಾಡಲು ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಈ ವಿಷಯದಲ್ಲಿ ಕಾಂಗ್ರೆಸ್ ಇಕ್ಕಟ್ಟಿಗೆ ಸಿಲುಕಿಲ್ಲ. ಬದಲಾಗಿ ಸಿಎಂ ಸಿಲುಕಿದರು ಎನ್ನುವುದಂತೂ ಸತ್ಯ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ.

Tags: census reportCMCongressSiddaramaiah
SendShareTweet
Previous Post

ರಾಜ್ಯದಲ್ಲಿ ಮತ್ತೆ ಚುರುಕುಗೊಂಡ ಮಳೆ

Next Post

ಭಾರತದ ಜನಸಂಖ್ಯೆಯ ಓಟ ಹೇಗಿದೆ? ಮಕ್ಕಳನ್ನು ಹೆರುವ ಸಾಮರ್ಥ್ಯ ಕಡಿಮೆಯಾಗುತ್ತಿದೆಯೇ?

Related Posts

ಪ್ರಜ್ವಲ್ ವಿಡಿಯೋ ಹರಿಬಿಟ್ಟವರಿಗೆ ಶುರುವಾದ ನಡುಕ
ರಾಜ್ಯ

ಪ್ರಜ್ವಲ್ ವಿಡಿಯೋ ಹರಿಬಿಟ್ಟವರಿಗೆ ಶುರುವಾದ ನಡುಕ

ಪ್ರಜ್ವಲ್ ಗೆ ಸಿಕ್ತು ಕೈದಿ ಸಂಖ್ಯೆ
ರಾಜ್ಯ

ಪ್ರಜ್ವಲ್ ಗೆ ಸಿಕ್ತು ಕೈದಿ ಸಂಖ್ಯೆ

ಕುಂದಾಪುರ : ಅಂಬೇಡ್ಕರ್ ಪುತ್ಥಳಿ ನಿರ್ಮಾಣ, ಯುಜಿಡಿ ಕಾಮಗಾರಿ ವಿಳಂಬಕ್ಕೆ ಆಕ್ರೋಶ
ರಾಜ್ಯ

ಕುಂದಾಪುರ : ಅಂಬೇಡ್ಕರ್ ಪುತ್ಥಳಿ ನಿರ್ಮಾಣ, ಯುಜಿಡಿ ಕಾಮಗಾರಿ ವಿಳಂಬಕ್ಕೆ ಆಕ್ರೋಶ

ಮಲ್ಪೆ ಬಂದರು ವಿಸ್ತರಣೆಗೆ ಯೋಜನೆ ರೂಪಿಸಿ : ರೋಹಿಣಿ
ರಾಜ್ಯ

ಮಲ್ಪೆ ಬಂದರು ವಿಸ್ತರಣೆಗೆ ಯೋಜನೆ ರೂಪಿಸಿ : ರೋಹಿಣಿ

ತಿಂಗಳಿಗೆ 16 ಸಾವಿರ ರೂ. ಉಳಿಸಿದರೆ, ಕೋಟ್ಯಧೀಶರಾಗಲು ಎಷ್ಟು ವರ್ಷ ಬೇಕು?
ರಾಜ್ಯ

ತಿಂಗಳಿಗೆ 16 ಸಾವಿರ ರೂ. ಉಳಿಸಿದರೆ, ಕೋಟ್ಯಧೀಶರಾಗಲು ಎಷ್ಟು ವರ್ಷ ಬೇಕು?

9/11 ವಿನಾಯಿತಿಗೆ ಪ್ರಸ್ತಾವನೆ ಸಲ್ಲಿಸಿ : ರೋಹಿಣಿ ಸಿಂಧೂರಿ
ರಾಜ್ಯ

9/11 ವಿನಾಯಿತಿಗೆ ಪ್ರಸ್ತಾವನೆ ಸಲ್ಲಿಸಿ : ರೋಹಿಣಿ ಸಿಂಧೂರಿ

Next Post
ಭಾರತದ ಜನಸಂಖ್ಯೆಯ ಓಟ ಹೇಗಿದೆ? ಮಕ್ಕಳನ್ನು ಹೆರುವ ಸಾಮರ್ಥ್ಯ ಕಡಿಮೆಯಾಗುತ್ತಿದೆಯೇ?

ಭಾರತದ ಜನಸಂಖ್ಯೆಯ ಓಟ ಹೇಗಿದೆ? ಮಕ್ಕಳನ್ನು ಹೆರುವ ಸಾಮರ್ಥ್ಯ ಕಡಿಮೆಯಾಗುತ್ತಿದೆಯೇ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬದಲಾಗಲಿದೆ ಪ್ರಜ್ವಲ್ ಜೀವನ ಶೈಲಿ

ಬದಲಾಗಲಿದೆ ಪ್ರಜ್ವಲ್ ಜೀವನ ಶೈಲಿ

ಪ್ರಜ್ವಲ್ ವಿಡಿಯೋ ಹರಿಬಿಟ್ಟವರಿಗೆ ಶುರುವಾದ ನಡುಕ

ಪ್ರಜ್ವಲ್ ವಿಡಿಯೋ ಹರಿಬಿಟ್ಟವರಿಗೆ ಶುರುವಾದ ನಡುಕ

ಗೌಡರ ಕುಟುಂಬಕ್ಕೆ ಕಪ್ಪು ಚುಕ್ಕೆ; ಜೀವನ ಪರ್ಯಂತ ಜೈಲು

ಗೌಡರ ಕುಟುಂಬಕ್ಕೆ ಕಪ್ಪು ಚುಕ್ಕೆ; ಜೀವನ ಪರ್ಯಂತ ಜೈಲು

ಪ್ರಜ್ವಲ್ ಗೆ ಸಿಕ್ತು ಕೈದಿ ಸಂಖ್ಯೆ

ಪ್ರಜ್ವಲ್ ಗೆ ಸಿಕ್ತು ಕೈದಿ ಸಂಖ್ಯೆ

Recent News

ಬದಲಾಗಲಿದೆ ಪ್ರಜ್ವಲ್ ಜೀವನ ಶೈಲಿ

ಬದಲಾಗಲಿದೆ ಪ್ರಜ್ವಲ್ ಜೀವನ ಶೈಲಿ

ಪ್ರಜ್ವಲ್ ವಿಡಿಯೋ ಹರಿಬಿಟ್ಟವರಿಗೆ ಶುರುವಾದ ನಡುಕ

ಪ್ರಜ್ವಲ್ ವಿಡಿಯೋ ಹರಿಬಿಟ್ಟವರಿಗೆ ಶುರುವಾದ ನಡುಕ

ಗೌಡರ ಕುಟುಂಬಕ್ಕೆ ಕಪ್ಪು ಚುಕ್ಕೆ; ಜೀವನ ಪರ್ಯಂತ ಜೈಲು

ಗೌಡರ ಕುಟುಂಬಕ್ಕೆ ಕಪ್ಪು ಚುಕ್ಕೆ; ಜೀವನ ಪರ್ಯಂತ ಜೈಲು

ಪ್ರಜ್ವಲ್ ಗೆ ಸಿಕ್ತು ಕೈದಿ ಸಂಖ್ಯೆ

ಪ್ರಜ್ವಲ್ ಗೆ ಸಿಕ್ತು ಕೈದಿ ಸಂಖ್ಯೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬದಲಾಗಲಿದೆ ಪ್ರಜ್ವಲ್ ಜೀವನ ಶೈಲಿ

ಬದಲಾಗಲಿದೆ ಪ್ರಜ್ವಲ್ ಜೀವನ ಶೈಲಿ

ಪ್ರಜ್ವಲ್ ವಿಡಿಯೋ ಹರಿಬಿಟ್ಟವರಿಗೆ ಶುರುವಾದ ನಡುಕ

ಪ್ರಜ್ವಲ್ ವಿಡಿಯೋ ಹರಿಬಿಟ್ಟವರಿಗೆ ಶುರುವಾದ ನಡುಕ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat