ನಾಗ್ಪುರ: ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಹತ್ಯೆ ಮಾಡಿರುವ ಘಟನೆಯನ್ನು ಇಡೀ ದೇಶವೇ ಖಂಡಿಸುತ್ತಿದೆ. ಈ ಘಟನೆಯನ್ನು ಹಲವರು ರಾಜಕೀಯವಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಈ ಮಧ್ಯೆ ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂದೂ -ಮುಸ್ಲಿಂರು ಸೇರಿ ಪ್ರತಿಭಟನೆ ನಡೆಸಿದ್ದಾರೆ.
ಮಂಗಳವಾರ ಉಗ್ರರು ದಾಳಿ ನಡೆಸಿ 26 ಜನರ ಹತ್ಯೆಗೆ ಕಾರಣವಾಗಿದ್ದಾರೆ. 2019ರಲ್ಲಿ ನಡೆದ ಪುಲ್ವಾಮಾ ದಾಳಿಯ ನಂತರ ಅತಿ ದೊಡ್ಡ ಭಯೋತ್ಪಾದಕ ದಾಳಿ ಇದು ಎನ್ನಬಹುದು. ದಾಳಿ ನಡೆಸಿದ್ದ ಭಯೋತ್ಪಾದಕರು ಧರ್ಮ ಕೇಳಿ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.
ಹಿಂದೂ ಮುಸ್ಲಿಂ ಸೇರಿಕೊಂಡು ಬೀದಿಗಳಿದು ಪ್ರತಿಭಟನೆ ನಡೆಸಿದ್ದಾರೆ. ರಾಷ್ಟ್ರ, ಕಾಶ್ಮೀರದಲ್ಲಿ ಪ್ರಾದೇಶಿಕವಾಗಿರುವ ಎಲ್ಲ ರಾಜಕೀಯ ಪಕ್ಷಗಳು, ವಿವಿಧ ಸಂಘ ಸಂಸ್ಥೆಗಳು ಬುಧವಾರ ಕಾಶ್ಮೀರದ ತುಂಬ ಬೀದಿಗೆ ಇಳಿದಿದ್ದಾರೆ. ಅಲ್ಲದೇ, ಕಾಶ್ಮೀರ ಹಾಗೂ ಜಮ್ಮುವಿನಲ್ಲಿ ಕೂಡ ಪ್ರತಿಭಟನೆ ನಡೆಸಲಾಗಿದೆ. ಈ ವೇಳೆ ಪಾಕ್ ಧ್ವಜ ಸುಟ್ಟು ಆಕ್ರೋಶ ವ್ಯಕ್ತಪಡಿಸಲಾಗಿದೆ. ಎಲ್ಲ ಶಾಲಾ-ಕಾಲೇಜು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗಿದೆ. ಇಂತಹ ಘಟನೆಗಳು ಜರುಗಬಾರದು. ಜಮ್ಮು ಕಾಶ್ಮೀರದ ಜನರು ಎಂದಿಗೂ ಭಯೋತ್ಪಾದನೆ ವಿರುಧ ಇದ್ದವರು. ಆದರೂ ಪಿತೂರಿ ನಡೆಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.