ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಜನ -ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ. ಕರಾವಳಿ ಜಿಲ್ಲೆಗಳಲ್ಲಂತೂ ವ್ಯಾಪಕ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೆಲವು ತಾಲೂಕುಗಳಲ್ಲಿ ಮಂಗಳವಾರ ರಜೆ ಘೋಷಿಸಲಾಗಿದೆ.
ಉತ್ತರ ಕನ್ನಡ (Uttara Kannada) ಜಿಲ್ಲೆಯ 8 ತಾಲೂಕುಗಳಲ್ಲಿನ ಅಂಗನವಾಡಿ, ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಿಗೆ (School) ರಜೆ ಘೋಷಿಸಲಾಗಿದೆ. ಕುಮಟಾ, ಕಾರವಾರ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿಗಳ ಸುರಕ್ಷತೆಯ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.