ಬೆಂಗಳೂರು ಗ್ರಾಮಾಂತರ: 7 ಹಿಲ್ಸ್ ಆಸ್ವತ್ರೆಯಿಂದ ಸಿಬ್ಬಂದಿಗೆ ಸಂಬಳ ನೀಡದೆ ಬೀಗ ಜಡಿದ ಆರೋಪವೊಂದು ಕೇಳಿ ಬಂದಿದೆ.
ಸಂಬಳ ನೀಡದೆ ಏಕಾಏಕಿ ಆಸ್ವತ್ರೆಗೆ ಬೀಗ ಜಡಿದಿದಕ್ಕೆ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಸಿಬ್ಬಂದಿ ಆಸ್ಪತ್ರೆ ಮುಂದೆ ಅಂಬೇಡ್ಕರ್ ಫೋಟೋ ಇಟ್ಟು ಆಕ್ರೋಶ ವ್ಯಕ್ತಪಡಿಸಿದೆ. ದೊಡ್ಡಬಳ್ಳಾಪುರ ನಗರದ 7 ಹಿಲ್ಸ್ ಆಸ್ವತ್ರೆ ಎದುರು ಪ್ರತಿಭಟನೆ ನಡೆಸಿದ್ದಾರೆ.
ಮೂರು ತಿಂಗಳಿಂದ ಸಂಬಳ ಕೊಟ್ಟಿಲ್ಲ ಎಂದು ಏಕಾಏಕಿ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ವತ್ರೆ ಮಾಲೀಕರು, ಆಡಳಿತ ಮಂಡಳಿ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ.
ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಸುಮಾರು 50ಕ್ಕೂ ಅಧಿಕ ಸಿಬ್ಬಂದಿ ಮೂರು ತಿಂಗಳಿಂದ ಸಂಬಳ ಇಲ್ಲದೆ ಕಾರ್ಯನಿರ್ವಹಿಸಿದ್ದಾರೆ. ಈ ಕುರಿತು ಹಲವು ಬಾರಿ ಮನವಿ ಮಾಡಿದರೂ ಸಂಬಳ ನೀಡಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ಆಸ್ಪತ್ರೆ ಆಡಳಿತ ಮಂಡಳಿಯಿಂದ ಸುಮಾರು 50ಕ್ಕೂ ಅಧಿಕ ಜನ ಸಿಬ್ಬಂದಿ ಹಾಗೂ ಕುಟುಂಬಗಳಿಗೆ ಅನ್ಯಾಯವಾಗಿದೆ. ಹೀಗಾಗಿ ನ್ಯಾಯ ಒದಗಿಸಬೇಕೆಂದು ಮನವಿ ಮಾಡಿದ್ದಾರೆ.