ಕುಡಿದ ಮತ್ತಿನಲ್ಲಿ ಹಾಸ್ಟೆಲ್ ವಾರ್ಡನ್ ರಂಪಾಟ ನಡೆಸಿರುವ ಘಟನೆ ತುಮಕೂರಿನ ಕೋತಿ ತೋಪು ಸರ್ಕಲ್ ನಲ್ಲಿರುವ ಬಿಸಿಎಂ ಹಾಸ್ಟೆಲ್ ನಲ್ಲಿ ನಡೆದಿದೆ.
ಕುಡಿದು ಬಂದ ವಾರ್ಡನ್ ರಾತ್ರಿ ವೇಳೆ ವಿದ್ಯಾರ್ಥಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.
ವಾರ್ಡನ್ ದರ್ಶನ್ ಎಂಬಾತ ಈ ಕೃತ್ಯ ಎಸಗಿದವನು ಎನ್ನಲಾಗಿದೆ. ಈ ಹಾಸ್ಟೆಲ್ ನಲ್ಲಿ ಸುಮಾರು 80ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ. ವಾರ್ಡನ್ ನ ರಂಪಾಟವನ್ನು ವಿದ್ಯಾರ್ಥಿಗಳು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.