ಬೆಂಗಳೂರು: ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಆರೋಪವೊಂದು ಕೇಳಿ ಬಂದಿದೆ.
ಬೆಂಗಳೂರಿನ ಹೆಬ್ಬಾಳದ ಕನಕನಗರದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಬಾಹರ್ ಅಸ್ಮಾ (29 ) ನೇಣಿಗೆ ಶರಣಾದ ಮಹಿಳೆ. ಬಾಹರ್ ಅಸ್ಮಾ ಕಳೆದ ಎರಡು ವರ್ಷಗಳ ಹಿಂದೆ ಬಶೀರ್ ವುಲ್ಲಾ ಎಂಬಾತನನ್ನು ಮದುವೆ ಆಗಿದ್ದರು. ಆದರೆ, ಪತಿ ಬಶೀರ್ ವುಲ್ಲಾ ಗೆ ಬೇರೆ ಯುವತಿಯೊಂದಿಗೆ ಅನೈತಿಕ ಸಂಬಂಧ ಇರುವ ಆರೋಪವಿದೆ. ಈ ಹಿನ್ನಲೆಯಲ್ಲಿ ಬೇಸತ್ತು ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಆದರೆ ಯುವತಿಯ ಕುಟುಂಬಸ್ಥರು, ಅಸ್ಮಾ ಆತ್ಮಹತ್ಯೆ ಮಾಡಿಕೊಂಡಿಲ್ಲ. ಬಶೀರ್ ವುಲ್ಲಾ ಕೊಲೆ ಮಾಡಿ ನೇಣಿಗೆ ಹಾಕಿದ್ದಾನೆಂದು ಆರೋಪ ಮಾಡಿದ್ದಾರೆ. ಈ ಕುರಿತು ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.