ಬೆಂಗಳೂರು: ನನ್ನ ನೆಲಕ್ಕೆ ಕೈಲಾದ ಸಹಾಯ ಮಾಡುವೆ ಎಂದು ಕ್ರಿಕೆಟಿಗ ಹಾಗೂ ಕನ್ನಡಿಗ ಅನಿಲ್ ಕುಂಬ್ಳೆ (Anil Kumbl) ಹೇಳಿದ್ದಾರೆ.
ಅರಣ್ಯ ಇಲಾಖೆ ರಾಯಭಾರಿಯಾಗಿ (Forest Department Brand Ambassador) ಆಯ್ಕೆಯಾದ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ(Eshwar Khandre) ಅವರನ್ನ ಭೇಟಿಯಾಗಿ ಅವರು ಮಾತನಾಡಿದರು.
ಸರ್ಕಾರವು ನನಗೆ ದೊಡ್ಡ ಜವಾಬ್ದಾರಿ ನೀಡಿದೆ. ನಾನು ಹಿಂದೆ ಕೂಡ ಉಪಾಧ್ಯಕ್ಷನಾಗಿದ್ದೆ. ಈಗ ಮತ್ತೊಮ್ಮೆ ಅವಕಾಶ ಸಿಕ್ಕಿದೆ. ಜವಾಬ್ದಾರಿ ಕೊಟ್ಟಿದ್ದಕ್ಕೆ ಸಂತೋಷವಾಗುತ್ತಿದೆ. ರಾಜ್ಯಕ್ಕೆ ಏನು ಸೇವೆ ಆಗುತ್ತೋ ಅದನ್ನು ಸಲ್ಲಿಸುತ್ತೇನೆ ಎಂದಿದ್ದಾರೆ.