ಕಲಬುರಗಿ: ರಾಜ್ಯದಲ್ಲಿ ಮತ್ತೊಮ್ಮೆ ಜನಿವಾರ ಜಟಾಪಟಿ ಮುನ್ನೆಲೆಗೆ ಬಂದಿದೆ.
ಇಂದು ನಡೆದ ನೀಟ್ ಪರೀಕ್ಷೆ ಸಂದರ್ಭದಲ್ಲಿ ಅಧಿಕಾರಿಗಳು ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದಾರೆ. ಹೀಗಾಗಿ ಬ್ರಾಹ್ಮಣರು ಬೀದಿಗೆ ಇಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತೀಚೆಗೆಷ್ಟೇ ರಾಜ್ಯದಲ್ಲಿ ಜನಿವಾರ ತೆಗೆಸಿದ ವಿಷಯ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಇದು ಮಾಸುವ ಮುನ್ನವೇ ಕಲಬುರಗಿಯಲ್ಲಿ ಮತ್ತೊಂದು ಘಟನೆ ನಡೆದಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿದೆ.
ಕಲಬುರಗಿಯ ಸೇಂಟ್ ಮೇರಿ ಶಾಲೆಯಲ್ಲಿ ನಡೆದ ನೀಟ್ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿ ಶ್ರೀಪಾದ್ ಪಾಟೀಲ್ ಎಂಬ ವಿದ್ಯಾರ್ಥಿ ಜನಿವಾರವನ್ನು ಅಧಿಕಾರಿಗಳು ತೆಗೆಸಿ, ಪರೀಕ್ಷೆ ಬರೆಯಲು ಅವಕಾಶ ನೀಡಿದ್ದಾರೆ. ವಿದ್ಯಾರ್ಥಿ ಜನಿವಾರ ತೆಗೆದು ಪರೀಕ್ಷೆ ಎದುರಿಸಿದ್ದು, ಜನಿವಾರ ತೆಗೆದೇ ಒಳಗೆ ಬರಬೇಕು ಎಂದು ಹೇಳಿದರು ಎಂದು ವಿದ್ಯಾರ್ಥಿ ಆರೋಪಿಸಿದ್ದಾನೆ.