ಕಾವೇರಿ ಆರತಿ ವಿರುದ್ದ ಮಾಜಿ ಜೆಡಿಎಸ್ ಶಾಸಕ ಸುರೇಶ್ ಗೌಡ ವ್ಯಂಗ್ಯವಾಡಿದ್ದಾರೆ.
ಈ ಕುರಿತು ನಾಗಮಂಗಲದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ರಾಜ್ಯವನ್ನು ಅಭಿವೃದ್ಧಿ ಮಾಡಲು ಮುಕ್ತ ಮನಸ್ಸಿನಿಂದ ಹೇಳಿದ್ದಾರೆ. ಆದರೆ, ರಾಜ್ಯ ಸರ್ಕಾರ ಅಡ್ಡಿಪಡಿಸುತ್ತಿದೆ ಕುಮಾರಸ್ವಾಮಿಗೆ ಹೆಸರು ಬರುತ್ತದೆ ಎಂದು ಈ ರೀತಿ ಮಾಡುತ್ತಿದ್ದಾರೆ.
ಕಾಂಗ್ರೆಸ್ ಮುಖಂಡರದು ಬರಿ ದುಡ್ಡು ಹೋಡೆಯುವ ಕಾರ್ಯಕ್ರಮ. ಕಾಂಗ್ರೆಸ್ ಭ್ರಷ್ಟಾಚಾರ ಮಿತಿ ಮೀರಿದೆ. ಇವರು ಎರಡೂವರೆ ವರ್ಷದಲ್ಲಿ ಕಡಿದು ಕಟ್ಟೆ ಹಾಕಿರುವುದು ಅಷ್ಟರಲ್ಲೇ ಇದೆ. ಲೂಟಿ ಕಾರ್ಯಕ್ರಮ ಬಿರುಸಿನಿಂದ ನಡೆಯುತ್ತಿದೆ. ದುಡ್ಡು ಹೊಡೆಯುವ ಉದ್ಧೇಶದಿಂದ 99 ಕೋಟಿ ರೂ. ವೆಚ್ಚದಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯುತ್ತಿದೆ. ಇದು ದುರದೃಷ್ಟಕರ. ಕಾಂಗ್ರೆಸ್ ನವರು ಹಣ ಲಪಟಾಯಿಸಲು ಈ ರೀತಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.