ಗದಗ: ಜಾತಿಗಣತಿ ವರದಿಯಲ್ಲಿ ಕುರಹಿನಶೆಟ್ಟಿ ಸಮಾಜಕ್ಕೆ ಅನ್ಯಾಯವಾಗಿದೆ ಎಂದು ನಗರದಲ್ಲಿ ನಾಲ್ಕಡಿ ನೀಲಕಂಠ ಪಟ್ಟದಾರ್ಯ ಮಹಾಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಂತರಾಜು ವರದಿಯಲ್ಲಿ ಕುರಹಿನಶೆಟ್ಟಿ ಸಮಾಜಕ್ಕೆ ಅನ್ಯಾಯವಾಗಿದೆ. ನಮ್ಮ ಸಮಾಜದ ಜನಗಣತಿ ಅಂಕಿ ಅಂಶಗಳು ಸತ್ಯಕ್ಕೆ ದೂರವಾಗಿದೆ. ಪೀಠಾಧ್ಯಕ್ಷನಾಗಿ ನಾನು ಕರ್ನಾಟಕದಾದ್ಯಂತ ಪ್ರವಾಸ ಕೈಗೊಂಡಿದ್ದೇನೆ. ಕುರುಹಿನಶೆಟ್ಟಿ ಸಮಾಜದ ಜನಸಂಖ್ಯೆಯು ಸುಮಾರು 12 ಲಕ್ಷಕ್ಕೂ ಅಧಿಕವಿದೆ. ಕಾಂತರಾಜು ವರದಿಯಲ್ಲಿ ಕೇವಲ ಒಂದೂವರೆ ಲಕ್ಷ ಅಂತ ಮಾತ್ರ ನಮೂದಾಗಿದೆ. ಈಗ ಜಾರಿಗೊಳಿಸುತ್ತಿರುವ ಸಮೀಕ್ಷಾ ವರದಿ ಸರಿಯಾಗಿಲ್ಲ ಎಂದಿದ್ದಾರೆ.
ಹತ್ತು ವರ್ಷಗಳ ಹಿಂದೆ ಮಾಡಿರುವ ಸಮೀಕ್ಷೆಯು ಅವೈಜ್ಞಾನಿಕವಾಗಿದೆ. ರಾಜ್ಯದ ನಾನಾ ಭಾಗಗಳಲ್ಲಿ 12ಲಕ್ಷಕ್ಕೂ ಅಧಿಕ ಜನಸಂಖ್ಯೆಯನ್ನು ಹೊಂದಿದ್ದೇವೆ. ಕಾಂತರಾಜು ವರದಿಯಲ್ಲಿ ಕಡಿಮೆ ಸಂಖ್ಯೆ ತೋರಿಸಿದೆ. ಇದರಿಂದ ಕುರಹಿನಶೆಟ್ಟಿ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ. ಜಾತಿ ಗಣತಿಯನ್ನು ಮತ್ತೊಮ್ಮೆ ನೆಡಸಬೇಕು.
ಕುರಹಿನಶೆಟ್ಟಿ ಸಮಾಜ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಹಿಂದಿದೆ. ಸರಕಾರವು ಆದಷ್ಟು ಬೇಗನೆ ಸರಿಯಾದ ಸಮೀಕ್ಷೆ ಮಾಡಿ ನಮ್ಮ ಸಮುದಾಯಕ್ಕೆ ಆದ ಅನ್ಯಾಯವನ್ನು ಸರಿಪಡಿಸಬೇಕು. ಇಲ್ಲವಾದಲ್ಲಿ ನಮ್ಮ ಹಕ್ಕುಗಳಿಗಾಗಿ ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡಲಾಗುವುದು ಎಂದಿದ್ದಾರೆ.