ಸ್ಟೇಡಿಯಂನಲ್ಲಿ ಕಾಲ್ತುಳಿತದಿಂದ 11 ಜನ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಸಿಬಿಯ (RCB) ವಿರಾಟ್ ಕೊಹ್ಲಿ (Virat Kohli) ವಿರುದ್ಧ ಮಾತನಾಡುವುದು ಮೂರ್ಖತನ ಎಂದು ಮಾಜಿ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಕಿಡಿಕಾರಿದ್ದಾರೆ.
ಕಾಲ್ತುಳಿತ ಪ್ರಕರಣ (Bengaluru Stampede)ದ ಕುರಿತು ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕೊಹ್ಲಿಯನ್ನು ಟೀಕಿಸುವ ಮೊದಲು ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳಿ. ಸಾರ್ವಜನಿಕ ಸುರಕ್ಷತೆಯ ಏಕೈಕ ಜವಾಬ್ದಾರಿ ರಾಜ್ಯ ಸರ್ಕಾರ ಮತ್ತು ಆಡಳಿತದ ಮೇಲಿದೆ. ಪರಿಸ್ಥಿತಿ ನಿಭಾಯಿಸುವಲ್ಲಿ ಅವರು ವಿಫಲರಾಗಿದ್ದಾರೆ. ದುರಂತಕ್ಕೆ ಅವರನ್ನು ಹೊಣೆಗಾರರನ್ನಾಗಿ ಮಾಡಬೇಕು. ಆದರೆ, ಕೊಹ್ಲಿಯನ್ನಲ್ಲ. 11 ಜನ ಅಮಾಯಕರು ಬಲಿಯಾಗಿದ್ದಾರೆ. ಕೂಡಲೇ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಅವರಿಗೆ ಕಠಿಣ ಶಿಕ್ಷೆ ನೀಡಬೇಕು. ಇದು ಸರ್ಕಾರದ ನಿರ್ಲಕ್ಷ್ಯ ಎಂದಿದ್ದಾರೆ.