ಬೆಂಗಳೂರು: ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನ ಸಾಮಾನ್ಯರ ಬದುಕನ್ನು ಕತ್ತಲಿಗೆ ದೂಡಿದೆ ಎಂದು ಆರೋಪಿಸಿರುವ ಬಿಜೆಪಿ ಈಗಾಗಲೇ ಬೀದಿಗಿಳಿದು ಹೋರಾಟ ನಡೆಸುತ್ತಿದೆ. ಈ ಮಧ್ಯೆ ಜೆಡಿಎಸ್ ಕೂಡ ರಾಜ್ಯ ಸರ್ಕಾರದ ವಿರುದ್ಧ ಕಹಳೆ ಊದಿದೆ.
ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಈಗ ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಎಂಬ ಪೋಸ್ಟರ್ ಬಿಡುಗಡೆ ಮಾಡಿದೆ. ಈ ಪೋಸ್ಟರ್ ಬೆಂಗಳೂರಿನ ನಗರದೆಲ್ಲೆಡೆ ರಾರಾಜಿಸುತ್ತಿವೆ. ಪೋಸ್ಟರ್ ನಲ್ಲಿ ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಎಂದು ಬರೆಯಲಾಗಿದೆ. ಅಲ್ಲದೇ, ಇದರೊಂದಿಗೆ ಬೃಹತ್ ಪ್ರತಿಭಟನೆ ನಡೆಸಲು ಕೂಡ ಜೆಡಿಎಸ್ ನಿರ್ಧರಿಸಿದೆ. ಪೋಸ್ಟರ್ ಮೂಲಕ ವಿನೂತನ ಅಭಿಯಾನ ಕೈಗೊಂಡಿದೆ.