ಬೆಂಗಳೂರು: ಕನ್ನಡದ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿರುವ ಕಮಲ್ ಹಾಸನ್ (Kamal Haasan) ಬಗ್ಗೆ ಕರ್ನಾಟಕದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಹೀಗಾಗಿ ಅವರು ನಟಿಸಿರುವ ಥಗ್ಲೈಫ್ (ThugLife) ಬಿಡುಗಡೆಗೆ ವಿರೋಧ ವ್ಯಕ್ತವಾಗಿದೆ. ಈ ಮಧ್ಯೆ ಕಮಲ್ ಕೋರ್ಟ್ ಮೆಟ್ಟಿಲೇರಿದ್ದು, ವಿಚಾರಣೆಯನ್ನು ಹೈಕೋರ್ಟ್ ಜೂ.20ಕ್ಕೆ ಮುಂದೂಡಿದೆ.
ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾ.ನಾಗಪ್ರಸನ್ನ ಅವರಿದ್ದ ಪೀಠ, ಕಮಲ್ ಹಾಸನ್ ಕ್ಷಮೆ ಕೇಳಲಿಲ್ವಾ? ಸುಪ್ರೀಂ ಕೋರ್ಟ್ ವಿಚಾರಣೆ ಏನಾಯ್ತು? ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಕಮಲ್ ಪರ ವಕೀಲರು ಕ್ಷಮೆ ಕೇಳಿಲ್ಲ, ಸುಪ್ರೀಂಕೋರ್ಟ್ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ ಎಂದರು.
ಅಲ್ಲದೇ, ಇಂದು ಕನ್ನಡ ಸಾಹಿತ್ಯ ಪರಿಷತ್ ಕೂಡ ಅರ್ಜಿ ಸಲ್ಲಿಸಿದೆ. ಈ ಕುರಿತು ಕಸಾಪ ಪರ ವಾದ ಮಂಡಿಸಿದ ಹಿರಿಯ ವಕೀಲ ಎಸ್.ಬಸವರಾಜ್ ಅವರು, ಕಮಲ ಹಾಸನ್ ಸ್ಟುಪಿಡ್ ಸ್ಟೇಟ್ಮೆಂಟ್ ನೀಡಿದ್ದಾರೆ. ಆನಂತರ ಹೇಳಿಕೆಗೆ ವಿಷಾದಿಸಿದರು. ವಾದ- ವಿವಾದ ಆಲಿಸಿದ ಕೋರ್ಟ್, ಜೂನ್ 20ಕ್ಕೆ ವಿಚಾರಣೆ ಮುಂದೂಡಿತು.