ಚನ್ನಪಟ್ಟಣ: ಕುಮಾರಸ್ವಾಮಿ ನೀಡಿದ ಹಣ ಪಡೆದು ಯೋಗೇಶ್ವರ್ ಗೆ ಮತ ಹಾಕಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು, ಸ್ಟೀಲ್, ಗಣಿ ಎಲ್ಲಿಂದ ಹಣ ತಂದರೂ ಜನರ ಮುಂದೆ ಅದು ನಡೆಯುವುದಿಲ್ಲ. ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕೆಲಸಗಳಿಗೆ ಜನ ಜೈ ಎನ್ನುತ್ತಾರೆ. ಕುಮಾರಸ್ವಾಮಿ ಹಣ ಪಡೆದು, ಯೋಗೇಶ್ವರ್ ಗೆ ಜನರು ಮತ ಹಾಕುತ್ತಾರೆ ಎಂದಿದ್ದಾರೆ.
ನಮ್ಮ ಅಧಿಕಾರ ನಶ್ವರ, ನಾವು ಮಾಡುವ ಸಾಧನೆ ಅಜರಾಮರ, ಮತದಾರರೇ ಈಶ್ವರ. ಹೀಗಾಗಿ ನಾವು ನಿಮ್ಮ ಮುಂದೆ ಕೈಮುಗಿದು ನಿಂತಿದ್ದೇವೆ. ನೀವು ಅಭಿವೃದ್ಧಿಗಾಗಿ ಮತ ಹಾಕಬೇಕು ಎಂದು ಮನವಿ ಮಾಡಿದ್ದಾರೆ.
ದೊಡ್ಡ ಆಲಹಳ್ಳಿ ಕೆಂಪೇಗೌಡರ ಮಕ್ಕಳು ಶಾಲೆಗಳ ಸ್ಥಾಪನೆ ಮಾಡಲು 25 ಎಕರೆ ಜಮೀನನ್ನು ದಾನ ಮಾಡಿದ್ದಾರೆ. ನೀವು ಒಬ್ಬರಿಗೂ ಸಹಾಯ ಮಾಡಿಲ್ಲ ಎಂದು ಕುಮಾರಸ್ವಾಮಿ ವಿರುದ್ಧ ವ್ಯಂಗ್ಯವಾಡಿದ್ದಾರೆ.